ಅ0ಕೋಲಾ : ಕಾಡು ಹಂದಿಯನ್ನು ಬೇಟೆಯಾಡಿ ಕೆಲ ಭಾಗಗಳನ್ನು ಹುದುಗಿಟ್ಟ ಆರೋಪದಡಿ ಅರಣ್ಯ ಇಲಾಖೆ ಅಧಿಕಾರಿಗಳು ಒಬ್ಬನನ್ನು ಬಂಧಿಸಿದ ಘಟನೆ ಹೆಬ್ಬುಳದಲ್ಲಿ ನಡೆದಿದೆ.
ಹೆಬ್ಬುಳದ ರಾಜೇಶ ಚಂದ್ರು ಪಡ್ತಿ (29) ಬಂಧಿತ ಆರೋಪಿ ಮತ್ತೊಬ್ಬ ಆರೋಪಿ ಸಂತೋಷ ದತ್ತಾ ಪಡ್ತಿ. ಹೆಬ್ಬುಳದ ಪರಾರಿಯಾಗಿದ್ದಾನೆ.
ಕಾಡು ಹಂದಿಯನ್ನು ಅರಣ್ಯ ಸಂರಕ್ಷಣಾಧಿಕಾರಿ ಡಾ. ಪ್ರಶಾಂತ ಕೆ.ಸಿ. ಮಾರ್ಗದರ್ಶನದಲ್ಲಿ ಅಂಕೋಲಾ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕೃಷ್ಣಯ್ಯ ಅಣ್ಣಯ್ಯ ಗೌಡ ಮತ್ತು ಮಾಸ್ತಿಕಟ್ಟಾ ವಲಯ ಅರಣ್ಯಾಧಿಕಾರಿ ವಿನಾಯಕ ಪಿ. ನಾಯ್ಕ, ಹೆಬ್ಬುಳ ವಲಯ ಅರಣ್ಯಾಧಿಕಾರಿ ಅರುಣ ನಡಕಟ್ಟಿನ, ಹೆಬ್ಬುಳ ಅರಣ್ಯ ಗಸ್ತು ಪಾಲಕ ಚನ್ನಪ್ಪ ಲಮಾಣಿ ಹಾಗೂ ಸಿಬ್ಬಂದಿ ದಾಳಿ ನಡೆಸಿ ಒಬ್ಬನನ್ನು ಬಂಧಿಸಿದ್ದಾರೆ.
ಅಲ್ಲದೆ, ಪಕ್ಕದ ತೋಟದಲ್ಲಿ ಹುದುಗಿಟ್ಟಿದ್ದ ಕಾಡು ಹಂದಿಯ ತಲೆ, ಕರುಳು ಮತ್ತು ಕಾಲುಗಳನ್ನು ವಶಕ್ಕೆ ಪಡೆದು ಮಹಜರು ನಡೆಸಿದ್ದಾರೆ. ಆರೋಪಿತರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ರ ಪ್ರಕಾರ ಪ್ರಕರಣ ದಾಖಲಾಗಿದೆ.
