TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಫೆ. 13-14 ರಂದು ಬೆಂಗಳೂರಿನಲ್ಲಿ ಬೃಹತ ಪ್ರತಿಭಟನೆ

Feb 6, 2024 | ವಿಶೇಷ |

ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಫೆ. 13-14 ರಂದು ಬೆಂಗಳೂರಿನಲ್ಲಿ ಬೃಹತ ಪ್ರತಿಭಟನೆ

ಅಂಕೋಲಾ : ಆಶಾ ಕಾರ್ಯಕರ್ತೆಯರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಮಾಸಿಕ ವೇತನ 15 ನಿಗದಿ ಮಾಡುವಂತೆ ಮತ್ತು ಇತರೆ ಸಮಸ್ಯೆಗಳ ಪರಿಹಾರಕ್ಕಾಗಿ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಫೆ. 13-14 ನಲ್ಲಿ ರಾಜ್ಯ ಮಟ್ಟದ ‘ವಿಧಾನ ಸೌಧ ಚಲೋ’ ಬೃಹತ್ ಪ್ರತಿಭಟನೆಯ ಹಿನ್ನಲೆಯಲ್ಲಿ ಅಂಕೋಲಾ ತಾಲೂಕು ಮಟ್ಟದ ಸಮಾವೇಶವನ್ನು ಪಟ್ಟಣದಲ್ಲಿ ನಡೆಯಿತು.

 ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಉಕ ಜಿಲ್ಲಾ ಸಲಹೆಗಾರ ಗಂಗಾಧರ ಬಡಿಗೇರ ಮಾತನಾಡಿ 8 ವರ್ಷಗಳ ಹಿಂದೆ ರಾಜ್ಯ ಸರ್ಕಾರ, ಜಾರಿಗೊಳಿಸಿದ ಆರ್.ಸಿ.ಹೆಚ್ ಪೋರ್ಟಲ್‌ಗೆ ಲಿಂಕ್ ಮಾಡಿದ್ದು ಆಶಾ ಕಾರ್ಯಕರ್ತೆಯರಿಗೆ ದೊಡ್ಡ ಶಾಪವಾಗಿದೆ. ವಿವಿಧ ದಾಖಲೆಗಳ ಪ್ರಕಾರ ಪ್ರತಿ ತಿಂಗಳು ಕನಿಷ್ಠ ಶೇ.25-30ರಷ್ಟು ಅಂದರೆ 10,000 ರಿಂದ 12,000 ಆಶಾಗಳು ಆರ್.ಸಿ.ಹೆಚ್ ಪೋರ್ಟಲ್‌ನ ಸಮಸ್ಯೆಗಳಿಂದ ದೊಡ್ಡ ಮೊತ್ತದ ನಷ್ಟಕ್ಕೆ ಒಳಗಾಗಿದ್ದಾರೆ.

ಆಶಾಗಳು ಕಷ್ಟ ಪಟ್ಟುದುಡಿದ ಹಣ ಸೋರಿಕೆಯಾಗುತ್ತಲೇ ಇದೆ. ಈ ಹಣಎಲ್ಲಿ ಹೋಗುತ್ತಿದೆ?ಎಂಬ ಪ್ರಶ್ನೆ ಆಶಾಗಳನ್ನು ಕಾಡುತ್ತಲೇ ಇದೆ. ಇದನ್ನು ಸರಿಪಡಿಸುವಂತೆ ಸಂಘವು ಸಾಕಷ್ಟು ಬಾರಿ ಪ್ರತಿಭಟನೆ ನಡೆಸಿದೆ, ಆರೋಗ್ಯ ಸಚಿವರ ಹಾಗೂ ಉನ್ನತ ಅಧಿಕಾರಿಗಳ ಉಪಸ್ಥಿತಿಯಲ್ಲಿ ಹಲವು ಸುತ್ತಿನ ಮಾತುಕತೆ ನಡೆಸಿದೆ. ಸಾಕಷ್ಟು ದಾಖಲೆಗಳನ್ನ ಸಹ ಸಂಘವು ನೀಡಿದೆ. ಆದರೂ ಆರೋಗ್ಯ ಇಲಾಖೆ ಹೇಗಾದರೂ ಈ ಪೋರ್ಟಲ್‌ಗೆ ಲಿಂಕ್ ಮಾಡಿ ಪ್ರೋತ್ಸಾಹಧನ ನೀಡುವ ಮಾದರಿಯನ್ನು ಉಳಿಸಿಕೊಳ್ಳುವ ತನ್ನ ಹಠಮಾರಿಧೋರಣೆನ್ನು ಮುಂದುವರೆಸಿದೆ ಎಂದರು.

ಈ ಎಲ್ಲ ಸಮಸ್ಯೆಗಳ ಏಕೈಕ ಪರಿಹಾರವೆಂದರೆ ಆಶಾಗಳ ವೇತನ ಪಾವತಿ ಪ್ರಕ್ರಿಯೆಯನ್ನು ಆರ್.ಸಿ.ಹೆಚ್ ಪೋರ್ಟಲ್ ನಿಂದ ಡಿ-ಲಿಂಕ್ ಮಾಡುವುದು. ಈ ಹಿನ್ನಲೆಯಲ್ಲಿ, ಈ ಬೇಡಿಕೆಯ ಜೊತೆಗೆ ರೂ.15,000 ನಿಶ್ಚಿತ ವೇತನ ನೀಡುವಂತೆ, ಇನ್ನಿತರ ನ್ಯಾಯ ಸಮ್ಮತ ಬೇಡಿಕೆಗಳನ್ನು ಈಡೇರಿಸುವಂತೆ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು ಅಂಕೋಲಾ ತಾಲ್ಲೂಕು ಸೇರಿದಂತೆ ಜಿಲ್ಲೆ ಎಲ್ಲ ಆಶಾ ಸೋದರಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಈ ಪ್ರತಿಭಟನೆಯನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ತಾಲೂಕಾಧ್ಯಕ್ಷೆ ಚಂದ್ರಕಲಾ ಒ ನಾಯ್ಕ, ಉಪಾಧ್ಯಕ್ಷರಾದ ಶಾರದಾ ನಾಯಕ, ನಾಗರತ್ನಾ ನಾಯಕ, ಮಾಲತಿ ನಾಯಕ, ಸುನಿತಾ ಗುಣಗಾ, ಜುಲೇಕಾ,ತಾರಾ ನಾಯ್ಕ, ಕಾರ್ಯದರ್ಶಿ ಸಂಗೀತಾ ನಾಯ್ಕ ಜಂಟಿ ಕಾರ್ಯದರ್ಶಿಗಳಾದ ಸವಿತಾ ಬಿ ನಾಯಕ, ಗಿರಿಜಾ ವೆರ್ಣೇಕರ್ ಸದಸ್ಯರಾದ ಸೌಭಾಗ್ಯ ಬಂಟ, ಪ್ರತಿಭಾ ನಾಯಕ, ರೂಪಾ ನಾಯ್ಕ, ರೋಹಿಣಿ ಗೌಡ, ಪ್ರೀತಿ ಭಂಟ್ ಸೇರಿದಂತೆ ತಾಲೂಕಿನ ಎಲ್ಲಾ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

Share:

Rate:

Previousಕೇಣಿ ಕ್ರಾಸ್‌ನಲ್ಲಿ ಮಟ್ಕಾ ಆಡಿಸುತ್ತಿದ್ದವನ ಬಂಧನ
Nextಗಂಡನ ತಮ್ಮನಿಂದ ದೈಹಿಕವಾಗಿ ಹಲ್ಲೆ ಹಾಗೂ ಬಟ್ಟೆ ಹರಿದು ಮಾನಕ್ಕೆ ಕುಂದು : ಮಹಿಳೆಯಿಂದ ದೂರು

Related Posts

ಹೊನ್ಗುಡಿ ಬೀಚ್‌ಲ್ಲಿ ಕಿಡಿಗೇಡಿಗಳ ಅಟ್ಟಹಾಸ :

ಹೊನ್ಗುಡಿ ಬೀಚ್‌ಲ್ಲಿ ಕಿಡಿಗೇಡಿಗಳ ಅಟ್ಟಹಾಸ :

November 4, 2023

ಸಾಲಕೊಡಿಸುವ ನೆಪದಲ್ಲಿ ಪಲ್ಲಂಗ ಏರಲು ಸಿದ್ದನಾದ ಬ್ಯಾಂಕ ಗುಮಾಸ್ತನಿಗೆ ಬಿತ್ತು ಧರ್ಮದೇಟು

ಸಾಲಕೊಡಿಸುವ ನೆಪದಲ್ಲಿ ಪಲ್ಲಂಗ ಏರಲು ಸಿದ್ದನಾದ ಬ್ಯಾಂಕ ಗುಮಾಸ್ತನಿಗೆ ಬಿತ್ತು ಧರ್ಮದೇಟು

February 8, 2025

ಅಕ್ರಮ ಮರಳು ಮಾಫಿಯಾದ ಕರಾಳ ದೃಷ್ಠಿಗೆ ಬರಡಾದ ಗಂಗಾವಳಿ

ಅಕ್ರಮ ಮರಳು ಮಾಫಿಯಾದ ಕರಾಳ ದೃಷ್ಠಿಗೆ ಬರಡಾದ ಗಂಗಾವಳಿ

November 3, 2023

ಶ್ರೀ ಹೋಲೆವೆಟರ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಲಗೇರಿಯ ನೂತನ ಅಧ್ಯಕ್ಷರಾಗಿ ಅಶೋಕ ರಾಮಚಂದ್ರ ನಾಯ್ಕ ಹಾಗೂ  ಕಾರ್ಯದರ್ಶಿಯಾಗಿ ಚಂದನ ಪಂಥ ಆಯ್ಕೆ

ಶ್ರೀ ಹೋಲೆವೆಟರ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಲಗೇರಿಯ ನೂತನ ಅಧ್ಯಕ್ಷರಾಗಿ ಅಶೋಕ ರಾಮಚಂದ್ರ ನಾಯ್ಕ ಹಾಗೂ ಕಾರ್ಯದರ್ಶಿಯಾಗಿ ಚಂದನ ಪಂಥ ಆಯ್ಕೆ

August 31, 2023

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
    ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
  • ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ
    ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ
  • ಗುಪ್ತಚರ ಇಲಾಖೆಯ ಸಿಬ್ಬಂದಿಯಾಗಿ ಶೇಖರ ಸಿದ್ದಿ
    ಗುಪ್ತಚರ ಇಲಾಖೆಯ ಸಿಬ್ಬಂದಿಯಾಗಿ ಶೇಖರ ಸಿದ್ದಿ
  • ಕರ್ತವ್ಯ ಲೋಪದ ಹಿನ್ನಲೆ : ಪುನೀತ್ ನಾಯ್ಕ ಭಟ್ಕಳ ಗ್ರಾಮೀಣ ಠಾಣೆಗೆ ನಿಯೋಜನೆ
    ಕರ್ತವ್ಯ ಲೋಪದ ಹಿನ್ನಲೆ : ಪುನೀತ್ ನಾಯ್ಕ ಭಟ್ಕಳ ಗ್ರಾಮೀಣ ಠಾಣೆಗೆ ನಿಯೋಜನೆ
  • ಗೋಕರ್ಣದಲ್ಲಿ ಜೂಜಿಗೆ ಕಡಿವಾಣ ಹಾಕಿದ ಸಿಪಿಐ ಶ್ರೀಧರ್ ಎಸ್.ಆರ್.
    ಗೋಕರ್ಣದಲ್ಲಿ ಜೂಜಿಗೆ ಕಡಿವಾಣ ಹಾಕಿದ ಸಿಪಿಐ ಶ್ರೀಧರ್ ಎಸ್.ಆರ್.

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy