TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಗಂಡನ ತಮ್ಮನಿಂದ ದೈಹಿಕವಾಗಿ ಹಲ್ಲೆ ಹಾಗೂ ಬಟ್ಟೆ ಹರಿದು ಮಾನಕ್ಕೆ ಕುಂದು : ಮಹಿಳೆಯಿಂದ ದೂರು

Feb 7, 2024 | ಅಪರಾಧ, ವಿಶೇಷ |

ಗಂಡನ ತಮ್ಮನಿಂದ ದೈಹಿಕವಾಗಿ ಹಲ್ಲೆ ಹಾಗೂ ಬಟ್ಟೆ ಹರಿದು ಮಾನಕ್ಕೆ ಕುಂದು : ಮಹಿಳೆಯಿಂದ ದೂರು

ದಿನಕರ ನಾಯ್ಕ. ಅಲಗೇರಿ.

ಅಂಕೋಲಾ : ಗ0ಡನ ತಮ್ಮನೆ ನನ್ನ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿ ಹಾಗೂ ಬಟ್ಟೆ ಹರಿದು ಮಾನಕ್ಕೆ ಕುಂದು ತಂದಿದ್ದಾನೆ ಎಂದು ಆರೋಪಿಸಿ ಮಹಿಳೆಯೊಬ್ಬಳು ಅಂಕೋಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.

ಪಟ್ಟಣದ ಕಾಕರಮಠದ ಮಹಿಳೆಯೊಬ್ಬಳು ಈ ಬಗ್ಗೆ ಪೊಲೀಸ್ ದೂರು ನೀಡಿ ಫೆ. 4 ರಂದು ಸಂಜೆ 4-50 ರಿಂದ 5-15 ರ ಅವಧಿಯಲ್ಲಿ ನಾನು ಅಂಗಡಿಯಿ0ದ ಮನೆಗೆ ಬಂದಾಗ ಗಂಡನ ತಮ್ಮ ಉಮರ ಅಹ್ಮದ ಶೇಖ ಈತ ಅವಾಚ್ಯವಾಗಿ ಬೈದು ನಿನ್ನ ಗಂಡ ಎಲ್ಲಿ ಹೋಗಿದ್ದಾನೆ. ಈಗ ಎಲ್ಲಿದ್ದಾನೆ. ಆತನ ಮೇಲೆ ನಾವು ಪೊಲೀಸ್ ಸ್ಟೇಷನನಲ್ಲಿ ಕೇಸ್ ಕೊಟ್ಟಿದ್ದೇವೆ. ಆತನಿಗೆ ಜೈಲಿಗೆ ಕಳುಹಿಸುತ್ತೇನೆ ಎಂದು ಹೇಳುತ್ತಲೆ. ನನ್ನ ಹಿಂಬಾಲಿಸುತ್ತ ಬೆಡ್ ರೂಮಿಗೆ ಬಂದವನು ಬಲ ಕೈ ಹಿಡಿದು ಎಳೆದು, ಹೊಡೆದಿದ್ದಲ್ಲದೆ, ಚುಡಿದಾರವನ್ನು ಹಿಡಿದು ಎಳೆದು ಹರಿದು ಹಾಕಿ, ಮಾನಕ್ಕೆ ಕುದುಂಟು ಮಾಡಿದ್ದಾನೆ.

ಆಗ ನಾನು ಜೋರಾಗಿ ಕೂಗಿಕೊಂಡಾಗ, ಆಗ ಆತ ನನ್ನನ್ನು ದೂಡಿ ಹಾಕಿ ಬೆಡ್ ರೂಮ್‌ನಿಂದ ಹೊರ ಬಂದು, ಮತ್ತೆ ಅವಾಚ್ಯವಾಗಿ ನಿಂದಿಸಿ ನಿನಗೆ ಹಾಗೂ ನಿನ್ನ ಗಂಡನನ್ನು ನಾನು ಸುಮ್ಮನೆ ಬಿಡುವದಿಲ್ಲ. ಇಬ್ಬರನ್ನು ಕೊಂದು ಹಾಕುತ್ತೇನೆ ಎಂದು ದೂರಿನ ಸಾರಾಂಶದಲ್ಲಿ ವಿವರಿಸಿದ್ದಾಳೆ.

ಆರೋಪಿ ಉಮರ ಅಹ್ಮದ ಶೇಖ ಅವರ ವಿರುದ್ದ ಪಿಎಸೈ ಉದ್ದಪ್ಪ ಧರೆಪ್ಪನವರ್ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಂಡಿದ್ದಾರೆ. ಆರೋಪಿಯ ಮೇಲೆ ಐಪಿಸಿ 506,504,323,354 ಕಲಂಅಡಿ ಪ್ರಕರಣ ದಾಖಲಾಗಿದೆ.

 

Share:

Rate:

Previousಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಫೆ. 13-14 ರಂದು ಬೆಂಗಳೂರಿನಲ್ಲಿ ಬೃಹತ ಪ್ರತಿಭಟನೆ
Nextಫೆ 10 ರಂದು ಅಂಕೋಲಾಕ್ಕೆ ಚಕ್ರವರ್ತಿ ಸೂಲಿಬೆಲೆ

Related Posts

ಹಣ ಮರಳಿಸಿ ಪ್ರಾಮಾಣಿಕತೆ ಮೆರೆದ ಸರಕಾರಿ ಆಸ್ಪತ್ರೆಯ ಸಿಬ್ಬಂದಿ ನಿಖಿತಾ ಪೆಡ್ನೇಕರ

ಹಣ ಮರಳಿಸಿ ಪ್ರಾಮಾಣಿಕತೆ ಮೆರೆದ ಸರಕಾರಿ ಆಸ್ಪತ್ರೆಯ ಸಿಬ್ಬಂದಿ ನಿಖಿತಾ ಪೆಡ್ನೇಕರ

November 19, 2023

ಗಣೇಶ ಹಬ್ಬದ ಹಿನ್ನಲೆ ಮದ್ಯ ಮಾರಾಟಕ್ಕೆ ನಿಷೇಧ :

ಗಣೇಶ ಹಬ್ಬದ ಹಿನ್ನಲೆ ಮದ್ಯ ಮಾರಾಟಕ್ಕೆ ನಿಷೇಧ :

September 18, 2023

ಹೃದಯಾಘಾತದಿಂದ ಕ್ರಿಯಾಶೀಲ ನಿವೃತ್ತ ಶಿಕ್ಷಕ ಪ್ರಕಾಶ ಕುಂಜಿ ನಿಧನ

ಹೃದಯಾಘಾತದಿಂದ ಕ್ರಿಯಾಶೀಲ ನಿವೃತ್ತ ಶಿಕ್ಷಕ ಪ್ರಕಾಶ ಕುಂಜಿ ನಿಧನ

December 19, 2024

ಶ್ರೀ ಹೋಲೆವೆಟರ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಲಗೇರಿಯ ನೂತನ ಅಧ್ಯಕ್ಷರಾಗಿ ಅಶೋಕ ರಾಮಚಂದ್ರ ನಾಯ್ಕ ಹಾಗೂ  ಕಾರ್ಯದರ್ಶಿಯಾಗಿ ಚಂದನ ಪಂಥ ಆಯ್ಕೆ

ಶ್ರೀ ಹೋಲೆವೆಟರ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಲಗೇರಿಯ ನೂತನ ಅಧ್ಯಕ್ಷರಾಗಿ ಅಶೋಕ ರಾಮಚಂದ್ರ ನಾಯ್ಕ ಹಾಗೂ ಕಾರ್ಯದರ್ಶಿಯಾಗಿ ಚಂದನ ಪಂಥ ಆಯ್ಕೆ

August 31, 2023

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ  ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ
    ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ
  • ಕೊಡ್ಲಗದ್ದೆಯಲ್ಲಿ ಹೆಚ್ಚಿದ ಚಿರತೆ ಹಾವಳಿ: ಗ್ರಾಮಸ್ಥರಲ್ಲಿ ಭೀತಿ
    ಕೊಡ್ಲಗದ್ದೆಯಲ್ಲಿ ಹೆಚ್ಚಿದ ಚಿರತೆ ಹಾವಳಿ: ಗ್ರಾಮಸ್ಥರಲ್ಲಿ ಭೀತಿ
  • ಮಹಿಳೆ ಸ್ನಾನ ಮಾಡುವವದನ್ನು ಇಣಕಿ ನೋಡಲು ಹೋಗಿ ಸಿಕ್ಕಿಬಿದ್ದ ಮಾಜಿ ಮಟ್ಕಾ ಬುಕ್ಕಿ
    ಮಹಿಳೆ ಸ್ನಾನ ಮಾಡುವವದನ್ನು ಇಣಕಿ ನೋಡಲು ಹೋಗಿ ಸಿಕ್ಕಿಬಿದ್ದ ಮಾಜಿ ಮಟ್ಕಾ ಬುಕ್ಕಿ
  • ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
    ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
  • ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ
    ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy