TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಸಾಹಿತಿ ವಿಷ್ಣು ನಾಯ್ಕ ಇನ್ನಿಲ್ಲ : ಬಾರದ ಲೋಕಕ್ಕೆ ಪಯಣ ಬೆಳೆಸಿದ ಸಾಹಿತ್ಯದ ಕೃಷಿಕಾರ.

Feb 18, 2024 | ವಿಶೇಷ |

ಸಾಹಿತಿ ವಿಷ್ಣು ನಾಯ್ಕ ಇನ್ನಿಲ್ಲ : ಬಾರದ ಲೋಕಕ್ಕೆ ಪಯಣ ಬೆಳೆಸಿದ ಸಾಹಿತ್ಯದ ಕೃಷಿಕಾರ.

ಅಂಕೋಲಾ : ನಾಡಿನ ನಾಮಾಂಕಿತ ಸಾಹಿತಗಳು, ಪತ್ರಕರ್ತರು ವಿಷ್ಣು ನಾಯ್ಕ (೮೫) ಅವರು ಶನಿವಾರ ರಾತ್ರಿ ವಿಧಿವಶರಾಗಿದ್ದಾರೆ.

ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಕಾರವಾರದ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವಿಷ್ಣು ನಾಯ್ಕ ಅವರು ಬಾರದ ಲೋಕಕ್ಕೆ ಪಯಣ ಬೆಳಿಸಿದ್ದಾರೆ. ತಮ್ಮ ಬರವಣೆಯ ಮೂಲಕ ಅಸಂಖ್ಯಾತ ಅಭಿಮಾನಿಗಳನ್ನು ವಿಷ್ಣು ನಾಯ್ಕ ಹೊಂದಿದ್ದರು.

ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಅಂಬಾರಕೊಡ್ಲದಲ್ಲಿ ೧೯೪೪ ಜುಲೈ ೧ ರಂದು ಜನಿಸಿದರು. ತಾಯಿ ಬುದವಂತಿ, ತಂದೆ ನಾಗಪ್ಪ ಅವರ ಪ್ರತಿಭಾವಂತ ಪುತ್ರನಾಗಿದ್ದ ವಿಷ್ಣು ನಾಯ್ಕ ಅವರು ಅಂಬಾರಕೊಡ್ಲ ಹಾಗೂ ಅಂಕೋಲಾದಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಇವರು ಮೈಸೂರು ವಿಶ್ವವಿದ್ಯಾಲಯದಿಂದ ಜಾನಪದ ಸಾಹಿತ್ಯ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಸಾಹಿತಿ, ಸಂಪಾದಕ, ಪ್ರಕಾಶಕ, ಸಂಘಟಕ ಹೀಗೆ ಅನೇಕ ಕ್ಷೇತ್ರದಲ್ಲಿ ಕೃಷಿ ಸಾಧಿಸಿದ್ದಾರೆ.

ರಾಘವೇಂದ್ರ ಪ್ರಕಾಶನದ ಮಾಲೀಕರು ಆಗಿದ್ದ ಇವರು ಬರೆದ ಪ್ರಮುಖ ಕೃತಿಗಳೆಂದರೆ ಸುಮನ, ಆ ರೀತಿ ಈ ರೀತಿ, ನನ್ನ ಅಂಬಾರಕೊಡಲು, ವಾಸ್ತವ, ಹೊಸಭತ್ತ ಮುಚ್ಚಿದ ಬಾಗಿಲು ಮತ್ತು ಮರಿಗುಬ್ಬಿ, ನೋವು ಪ್ರೀತಿಯ ಪ್ರಶ್ನೆ (ಕವನ ಸಂಗ್ರಹಗಳು) ಕಣ್ಣೀರ ಕತೆಗಳು (ಸಂಕಲನ) ಅಯ್ನೋರ ಪೂಜೆ; ಒಂದು ಹನಿ ಮತ್ತು ಇತರ ಬೀದಿನಾಟಕಗಳು; ಯುದ್ಧ (ನಾಟಕಗಳು) ಡಾ. ಗೌರೀಶ ಕಾಯ್ಕಿಣಿ ಸಮಗ್ರ ಸಂಪುಟಗಳು (ಸಂಪಾದನೆ) ದುಡಿಯುವ ಕೈಗಳ ಹೋರಾಟದ ಕತೆ (ಮಾನವಿಕ) ಮುಂತಾದವುಗಳು ವಿಷ್ಣು ನಾಯ್ಕ ಅವರ ಕಲ್ಪನೆಯಲ್ಲಿ ಮೂಡಿ ಬಂದ ಸಾಹಿತ್ಯದ ಗರಿಗಳು.

ಕೆ.ಎಚ್. ಪಾಟೀಲರ ಸಂಪಾದಕತ್ವದಲ್ಲಿ ಹೊರ ತರುತ್ತಿದ್ದ ‘ವಿಶಾಲ ಕರ್ನಾಟಕ’ ದೈನಿಕ ಪತ್ರಿಕೆಯ ಪಾಕ್ಷಿಕ ಅಂಕಣಕಾರರಾಗಿ, ಮಂಗಳೂರಿನ ವಡ್ಡರ್ಸೆ ರಘುರಾಮ ಶೆಟ್ಟರ ಸಂಪಾದಕತ್ವದಲ್ಲಿ ತರುತ್ತಿದ್ದ ‘ಮುಂಗಾರು’ ದೈನಿಕ ಪತ್ರಿಕೆಯ ವರದಿಗಾರರಾಗಿ, ‘ಕರಾವಳಿ ಮುಂಜಾವು’, ‘ಕರಾವಳಿ ಸುಪ್ರಭಾತ’, ‘ಮುನ್ನಡೆ’, ‘ತೇಜಸ್ವಿ ಪ್ರಪಂಚ’, ಮುಂತಾದ ಪತ್ರಿಕೆಗಳ ಅಂಕಣಕಾರರಾಗಿ ಕಾರ್ಯನಿರ್ವಹಣೆ ಮಾಡಿ ಮಾಧ್ಯಮ ಕ್ಷೇತ್ರಕ್ಕೆ ಅಪಾರ ಕೊಡುಗೆ ಸಲ್ಲಿಸಿದ ವಿಷ್ಣು ನಾಯ್ಕ ಸಾಹಿತ್ಯ ಮೇರು ಪರ್ವತವಾಗಿ ಗುರುತಿಸಿಕೊಂಡಿದ್ದರು.

ಇವರ ಸಾಹಿತ್ಯ ಕೊಡುಗೆಗಾಗಿ ಕರ್ನಾಟಕ ರಾಜೊತ್ಸವ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ, ರಾಜ್ಯ ಆದರ್ಶ ಶಿಕ್ಷಕ ಪ್ರಶಸ್ತಿ, ಅತ್ಯುತ್ತಮ ಗ್ರಂಥ ಪ್ರಕಾಶಕ ಪ್ರಶಸ್ತಿ, ಎಸ್.ವಿ. ಪರಮೇಶ್ವರ ಭಟ್ಟರ ಕನ್ನಡ ಪರಿಚಾರಕ ಪ್ರಶಸ್ತಿ, ಬೇಂದ್ರೆ ಕಾವ್ಯ ಪ್ರಶಸ್ತಿ, ಕಾಯ್ಕಿಣಿ ಪ್ರತಿಷ್ಠಾನ ಪ್ರಶಸ್ತಿ, ಚೌಡಯ್ಯ ಸಾಹಿತ್ಯ ಪ್ರಶಸ್ತಿಗಳು ಅವರನ್ನರಸಿವೆ. ಉತ್ತರ ಕನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆ, ರಾಜ್ಯ ಹಲವಾರು ಸಾಹಿತ್ಯ ಗೋಷ್ಠಿಗಳ ಅಧ್ಯಕ್ಷತೆಯ ಹಾಗೂ ಮತ್ತಿತರ ಗೌರವ ಪುರಸ್ಕಾರಗಳು ಅವರಿಗೆ ಸಂದಿವೆ.

ಮೃತ ವಿಷ್ಣು ನಾಯ್ಕ ಅವರು ಇರ್ವರು ಪುತ್ರಿಯರು, ಅಳಿಯಂದಿರು ಸೇರಿದಂತೆ ಅಪಾರ ಬಂಧು ಬಳಗವನ್ನು ಬಿಟ್ಟು ಅಗಲಿದ್ದಾರೆ.

ರಾಘು ಕಾಕರಮಠ.

Share:

Rate:

Previousನಕಲಿ ಪತ್ರಕರ್ತರನ್ನು ನಿಗ್ರಹಿಸುವಂತೆ ಅಂಕೋಲಾ ಕಾರ್ಯನಿರತ ಪತ್ರಕರ್ತರಿಂದ ಮನವಿ
Nextಸಾವಿನಲ್ಲೂ ಒಂದಾದ ತಾಯಿ – ಮಗ

Related Posts

ಜೈಹಿಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ  ವಿಶ್ವಜ ನಾಯಕ  ರಾಜ್ಯ ಮಟ್ಟಕ್ಕೆ

ಜೈಹಿಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ  ವಿಶ್ವಜ ನಾಯಕ  ರಾಜ್ಯ ಮಟ್ಟಕ್ಕೆ

November 13, 2023

ಡಿವೈಎಸ್ಪಿಯಾಗಿ ಎಚ್ ಜಯರಾಜ್ ಪದೋನ್ನತಿ

ಡಿವೈಎಸ್ಪಿಯಾಗಿ ಎಚ್ ಜಯರಾಜ್ ಪದೋನ್ನತಿ

March 1, 2025

ಮಂಗಳಮುಖಿಯ ವೇಷಧರಿಸಿ ಬೀಕ್ಷೆಬೇಡುತ್ತಿದ್ದ ವ್ಯಕ್ತಿಯ ಸೀರೆ ಬಿಚ್ಚಿಸಿ ಅಸಲಿ ಮಂಗಳಮುಖಿಯರಿ0ದ ಧರ್ಮದೇಟು

ಮಂಗಳಮುಖಿಯ ವೇಷಧರಿಸಿ ಬೀಕ್ಷೆಬೇಡುತ್ತಿದ್ದ ವ್ಯಕ್ತಿಯ ಸೀರೆ ಬಿಚ್ಚಿಸಿ ಅಸಲಿ ಮಂಗಳಮುಖಿಯರಿ0ದ ಧರ್ಮದೇಟು

August 11, 2023

ಹಟ್ಟಿಕೇರಿಯ ಶಾಲೆಯಲ್ಲಿ ಗೋ ಪ್ರೇಮಿಗಳ ಕುಟುಂಬದ ವತಿಯಿಂದ 77 ನೇ ಸ್ವಾತಂತ್ರೋತ್ಸವದ ಪ್ರಯುಕ್ತ ಭಾಷಣ ಸ್ಪರ್ಧೆ

ಹಟ್ಟಿಕೇರಿಯ ಶಾಲೆಯಲ್ಲಿ ಗೋ ಪ್ರೇಮಿಗಳ ಕುಟುಂಬದ ವತಿಯಿಂದ 77 ನೇ ಸ್ವಾತಂತ್ರೋತ್ಸವದ ಪ್ರಯುಕ್ತ ಭಾಷಣ ಸ್ಪರ್ಧೆ

August 14, 2023

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
    ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
  • ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ
    ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ
  • ಗುಪ್ತಚರ ಇಲಾಖೆಯ ಸಿಬ್ಬಂದಿಯಾಗಿ ಶೇಖರ ಸಿದ್ದಿ
    ಗುಪ್ತಚರ ಇಲಾಖೆಯ ಸಿಬ್ಬಂದಿಯಾಗಿ ಶೇಖರ ಸಿದ್ದಿ
  • ಕರ್ತವ್ಯ ಲೋಪದ ಹಿನ್ನಲೆ : ಪುನೀತ್ ನಾಯ್ಕ ಭಟ್ಕಳ ಗ್ರಾಮೀಣ ಠಾಣೆಗೆ ನಿಯೋಜನೆ
    ಕರ್ತವ್ಯ ಲೋಪದ ಹಿನ್ನಲೆ : ಪುನೀತ್ ನಾಯ್ಕ ಭಟ್ಕಳ ಗ್ರಾಮೀಣ ಠಾಣೆಗೆ ನಿಯೋಜನೆ
  • ಗೋಕರ್ಣದಲ್ಲಿ ಜೂಜಿಗೆ ಕಡಿವಾಣ ಹಾಕಿದ ಸಿಪಿಐ ಶ್ರೀಧರ್ ಎಸ್.ಆರ್.
    ಗೋಕರ್ಣದಲ್ಲಿ ಜೂಜಿಗೆ ಕಡಿವಾಣ ಹಾಕಿದ ಸಿಪಿಐ ಶ್ರೀಧರ್ ಎಸ್.ಆರ್.

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy