TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಗೋವಾದ ಕ್ಯಾಸಿನೋ ಪಾಲಾದ ಅಂಕೋಲಾದ ಸ್ತ್ರೀ ಶಕ್ತಿ ಸ್ವಸಹಾಯ ಸಂಘದ ಬಡ ಮಹಿಳೆಯ ಹಣ..?

Mar 9, 2024 | Uncategorized |

ಗೋವಾದ ಕ್ಯಾಸಿನೋ ಪಾಲಾದ ಅಂಕೋಲಾದ ಸ್ತ್ರೀ ಶಕ್ತಿ ಸ್ವಸಹಾಯ ಸಂಘದ ಬಡ ಮಹಿಳೆಯ ಹಣ..?

ಗೋವಾದ ಕ್ಯಾಸಿನೋ ಪಾಲಾದ ಅಂಕೋಲಾದ ಸ್ತಿçà ಶಕ್ತಿ ಸ್ವಸಹಾಯ ಸಂಘದ ಬಡ ಮಹಿಳೆಯ ಹಣ..?

ಅಂಕೋಲಾಕ್ಕೆ ಸಿಐಡಿ ಅಧಿಕಾರಿಗಳ ತಂಡ

ರಾಘು ಕಾಕರಮಠ.

ಅಂಕೋಲಾ : ಇಲ್ಲಿನ ಕೆನರಾ (ಸಿಂಡಿಕೇಟ್) ಬ್ಯಾಂಕಿನಲ್ಲಿ ಮ್ಯಾನೇಜರ್ ಆಗಿದ್ದ ವೆಂಕಟೇಷ ಮಜ್ಜಿಗುಡ್ಡಾ ಅವರಿಂದ ನಡೆದ ಕೋಟ್ಯಾಂತರ ರೂಪಾಯಿ ಅವ್ಯವಹಾರಕ್ಕೆ ಸಂಬಂದಿಸಿದ0ತೆ ವಿಶೇಷ ತನಿಖೆ ನಡೆಸಲು ಸಿಐಡಿ ಅಧಿಕಾರಿಗಳ ತಂಡ ಮುಂದಾಗಿದೆ.

ಸೋಮವಾರದಿಂದ ತನಿಖೆ ಕೈಗೊಳ್ಳಲು ಮುಂದಾದ ಸಿಐಡಿ ತಂಡ ಬ್ಯಾಂಕಗೆ ಪ್ರಥಮವಾಗಿ ಭೇಟಿ ನೀಡಿ ಅಲ್ಲಿನ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳಲಿದೆ. ದೂರು ನೀಡಿರುವ ಪ್ರಸ್ತುತ ಕೆನರಾ (ಸಿಂಡಿಕೇಟ್ ಬ್ಯಾಂಕಿನ) ಮ್ಯಾನೇಜರ್ ಪ್ರತೀಕ್ಷಾ ಕಾರೆ ಅವರಿಂದ ಸಮಗ್ರ ವಿವರಣೆ ಪಡೆದು ವಿಚಾರಣೆಗೆ ಮುಂದಾಗಲಿದೆ.

ಸಿಐಡಿಯ ಡಿವೈಎಸ್ಪಿ, ಸೇರಿದಂತೆ 8 ಸಿಬ್ಬಂದಿಗಳ ತಂಡ ತನಿಖಾ ಕಾರ್ಯ ಕೈಗೊಳ್ಳಲಿದೆ ಎಂದು ಆಪ್ತ ಸುದ್ದಿ ಮೂಲಗಳಿಂದ ತಿಳಿದುಬಂದಿದೆ. ಈ ಅಪರಾತಪರಾ ಪ್ರಕರಣದಲ್ಲಿ ಕೇವಲ ಮ್ಯಾನೇಜರ್ ಅಷ್ಟೇ ಪಾಲ್ಗೊಳ್ಳದೆ, ಇನ್ನು ಮೂವರು ಕಿರಿಯ ಸಿಬ್ಬಂದಿಗಳು ಸಹ ಭಾಗಿಯಾಗಿದ್ದಾರೆ ಎಂದು ಆರೋಪವು ವ್ಯಕ್ತವಾಗಿದೆ. ಈ ಹಿನ್ನಲೆಯಲ್ಲಿ ಅವರನ್ನು ಸಹ ಸಿಐಡಿ ತಂಡ ವಿಚಾರಣೆಗೆ ಒಳಪಡಿಸುತ್ತದೆ ಎಂಬ ಮಾಹಿತಿ ಗೊತ್ತಾಗಿದೆ.

ಬ್ಯಾಂಕಿನಲ್ಲಿ ಅಪರಾತಪರಾ ಮಾಡಿದ ಹಣವನ್ನು ತನ್ನ ಮಾವ, ಪತ್ನಿಯ ಹಾಗೂ ಇನ್ನಿತರ ಖಾತೆಗೆ ವರ್ಗಾವಣೆಯಾಗಿರುವದು ಮೇಲ್ನೋಟಕ್ಕೆ ಕಂಡು ಬಂದಿದೆ.

ಗೋವಾದ ಕ್ಯಾಸಿನೋಕ್ಕೆ ಅಂಕೋಲಾದ ಸ್ತ್ರೀ ಶಕ್ತಿ ಸ್ವಸಹಾಯ ಸಂಘದ ಬಡ ಮಹಿಳೆಯ ಹಣ..?

ಕೆನರಾ (ಸಿಂಡಿಕೇಟ್) ಬ್ಯಾಂಕಿನಲ್ಲಿ ಮ್ಯಾನೇಜರ್ ಆಗಿದ್ದ ವೆಂಕಟೇಷ ಮಜ್ಜಿಗುಡ್ಡಾ ಅವರು ಸುಮಾರು 4 ಕೋಟಿಗೂ ಹೆಚ್ಚು ಹಣ ಗೋವಾದ ಕ್ಯಾಸಿನೋಕ್ಕೆ ಸುರಿದಿದ್ದಾರೆ ಎಂದು ಗೊತ್ತಾಗಿದೆ. ಇದರಲ್ಲಿ ಬ್ಯಾಂಕಿಗೆ ಸಂಬAದಿಸಿದAತೆ 1 ಕೋಟಿ 94 ಲಕ್ಷ ಹಣ ದುರಪಯೋಗಗೊಂಡಿದೆ ಎಂದು ಪೊಲೀಸ್ ದೂರು ದಾಖಲಾಗಿದೆ.

ಹಾಗೆ ವೆಂಕಟೇಷ ಮಜ್ಜಿಗುಡ್ಡಾ ಅವರು ಕಾಕರಮಠದಲ್ಲಿರುವ ಸ್ನೇಹಿತನ ಜೊತೆ ನಿರಂತರ ಪೋನ್ ಸಂಪರ್ಕ ಇರುವದು ಗೊತ್ತಾಗಿದೆ. ಈ ಹಿನ್ನಲೆಯಲ್ಲಿ ಅವರನ್ನು ಸಹ ವಿಚಾರಣೆ ನಡೆಸಲು ಸಿಐಡಿ ತಂಡ ರೂಪುರೇಷೆ ಸಿದ್ಧಪಡಿಸಿಕೊಂಡಿದೆ ಎಂದು ಗೊತ್ತಾಗಿದೆ. ಹಾಗೆ ವಂಚನೆಗೊಳಗಾದ 50 ಸ್ವಸಹಾಯ ಸಂಘದ ಮಹಿಳೆಯರಿಂದಲೂ ಹೇಳಿಕೆ ಪಡೆದುಕೊಳ್ಳಲಿದೆ.

ಪ್ರಕರಣವೇನು..?

ಸ್ತಿçà ಶಕ್ತಿ ಸ್ವಸಹಾಯ ಸಂಘಗಳಿಗೆ ಸಾಲ ನೀಡಿ, ಅದನ್ನು ಸಂಘದವರು ಮರು ಪಾವತಿ ಮಾಡಿದರೂ ಸಹ, ದಾಖಲೆಗಳಲ್ಲಿ ನಮೂದಿಸದೇ ಬ್ಯಾಂಕಿನ ಹಿರಿಯ ವ್ಯವಸ್ಥಾಪಕರಾಗಿದ್ದ ವೆಂಕಟೇಷ ಮಜ್ಜಿಗಡ್ಡಾ ನಮಗೆ ಮೋಸ ಮಾಡಿದ್ದಾರೆ ಎಂದು ಸಂಘದ ಮಹಿಳೆಯರು ಇವರ ವಿರುದ್ದ ಗಂಭೀರ ಆರೋಪ ಮಾಡಿದ್ದರು. ಹಾಗೆ ಬ್ಯಾಂಕಿನ ಇತರೆ ಸಿಬ್ಬಂದಿಗಳ ಐಡಿ ಬಳಸಿ ಬ್ಯಾಂಕ ಹಾಗೂ ಗ್ರಾಹಕರಿಗೆ ವಂಚಿಸಿರುವ ಬಗ್ಗೆ ದೂರು ಕೇಳಿ ಬಂದಿತ್ತು.

ಮಣಿಪಾಲದ ಕೆನರಾ ಬ್ಯಾಂಕ್‌ನಿAದ ಆಗಮಿಸಿದ ತನಿಖಾ ತಂಡ ಇಲಾಖಾ ವಿಚಾರಣೆ ನಡೆಸಿತ್ತು. ಈ ವೇಳೆ ವೆಂಕಟೇಷ ಮಜ್ಜಿಗಡಾ ಅವರು ಬ್ಯಾಂಕನಲ್ಲಿ ಅಪರಾತಪರಾ ಮಾಡಿರುವದು ಸಾಬೀತಾದ ಹಿನ್ನಲೆಯಲ್ಲಿ ಅವರ ಮೇಲೆ ಬ್ಯಾಂಕ್ ಕಾಯ್ದೆಯಡಿ ದೋಷಾರೋಪಣ ಪಟ್ಟಿಯನ್ನ ಕೆನರಾ ಬ್ಯಾಂಕಿನ ರಾಜ್ಯ ಮುಖ್ಯ ಅಧಿಕಾರಿಗಳಿಗೆ ಸಲ್ಲಿಸಿದ್ದರು.

ವರದಿಯನ್ನು ಸಂಪೂರ್ಣ ಅವಲೋಕಿಸಿದ ಆರ್.ಬಿ.ಐ ಮುಖ್ಯ ಅಧಿಕಾರಿ ಅವರು ವೆಂಕಟೇಷ ಮಜ್ಜಿಗಡ್ಡಾ ಅವರನ್ನು ಸೇವೆಯಿಂದಲೆ ಮುಕ್ತಗೊಳಿಸಿ ಆದೇಶ ಹೊರಡಿಸಿದ್ದರು.

Share:

Rate:

Previousನೇಣಿಗೆ ಶರಣಾದ ಅಗಸೂರಿನ ಬಾಲಚಂದ್ರ ನಾಯಕ
Nextಅಂಕೋಲಾದ ವೈಧ್ಯೆ ವಿರುದ್ದದ ಪೋಕ್ಸೋ ಕೇಸ್ ರದ್ದು

Related Posts

32 ವರ್ಷದ ನಂತರ ವಿಚ್ಛೇಧನ ಕೇಳಲು ಮುಂದಾದ ಪತ್ನಿ

32 ವರ್ಷದ ನಂತರ ವಿಚ್ಛೇಧನ ಕೇಳಲು ಮುಂದಾದ ಪತ್ನಿ

December 11, 2024

ಅಂಕೋಲಾದಲ್ಲಿ ಮಹಿಳೆಯರಲ್ಲಿ ಹೆಚ್ಚಿದ ಜಿಮ್ ಕ್ರೇಜ್ :

ಅಂಕೋಲಾದಲ್ಲಿ ಮಹಿಳೆಯರಲ್ಲಿ ಹೆಚ್ಚಿದ ಜಿಮ್ ಕ್ರೇಜ್ :

January 9, 2025

ನಕಲಿ ಪತ್ರಕರ್ತರನ್ನು ನಿಗ್ರಹಿಸುವಂತೆ ಅಂಕೋಲಾ ಕಾರ್ಯನಿರತ ಪತ್ರಕರ್ತರಿಂದ ಮನವಿ

ನಕಲಿ ಪತ್ರಕರ್ತರನ್ನು ನಿಗ್ರಹಿಸುವಂತೆ ಅಂಕೋಲಾ ಕಾರ್ಯನಿರತ ಪತ್ರಕರ್ತರಿಂದ ಮನವಿ

February 17, 2024

ಅಲಗೇರಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಸಂತೋಷ್ ನಾಯ್ಕ ಹಾಗೂ ಉಪಾಧ್ಯಕ್ಷರಾಗಿ ಶೋಭಾ ಗೋವಿಂದ ಆಗೇರ ಜಯಭೇರಿ. ಕಾಂಗ್ರೆಸ್ ಗೆ ಅಭೂತಪೂರ್ವ ಮುನ್ನಡೆ: ಸೈಲ್ ಶುಭಾಶಯ

ಅಲಗೇರಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಸಂತೋಷ್ ನಾಯ್ಕ ಹಾಗೂ ಉಪಾಧ್ಯಕ್ಷರಾಗಿ ಶೋಭಾ ಗೋವಿಂದ ಆಗೇರ ಜಯಭೇರಿ. ಕಾಂಗ್ರೆಸ್ ಗೆ ಅಭೂತಪೂರ್ವ ಮುನ್ನಡೆ: ಸೈಲ್ ಶುಭಾಶಯ

August 9, 2023

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ  ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ
    ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ
  • ಕೊಡ್ಲಗದ್ದೆಯಲ್ಲಿ ಹೆಚ್ಚಿದ ಚಿರತೆ ಹಾವಳಿ: ಗ್ರಾಮಸ್ಥರಲ್ಲಿ ಭೀತಿ
    ಕೊಡ್ಲಗದ್ದೆಯಲ್ಲಿ ಹೆಚ್ಚಿದ ಚಿರತೆ ಹಾವಳಿ: ಗ್ರಾಮಸ್ಥರಲ್ಲಿ ಭೀತಿ
  • ಮಹಿಳೆ ಸ್ನಾನ ಮಾಡುವವದನ್ನು ಇಣಕಿ ನೋಡಲು ಹೋಗಿ ಸಿಕ್ಕಿಬಿದ್ದ ಮಾಜಿ ಮಟ್ಕಾ ಬುಕ್ಕಿ
    ಮಹಿಳೆ ಸ್ನಾನ ಮಾಡುವವದನ್ನು ಇಣಕಿ ನೋಡಲು ಹೋಗಿ ಸಿಕ್ಕಿಬಿದ್ದ ಮಾಜಿ ಮಟ್ಕಾ ಬುಕ್ಕಿ
  • ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
    ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
  • ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ
    ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy