TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಗೋವಾದ ಕ್ಯಾಸಿನೋ ಪಾಲಾದ ಅಂಕೋಲಾದ ಸ್ತ್ರೀ ಶಕ್ತಿ ಸ್ವಸಹಾಯ ಸಂಘದ ಬಡ ಮಹಿಳೆಯ ಹಣ..?

Mar 9, 2024 | Uncategorized |

ಗೋವಾದ ಕ್ಯಾಸಿನೋ ಪಾಲಾದ ಅಂಕೋಲಾದ ಸ್ತ್ರೀ ಶಕ್ತಿ ಸ್ವಸಹಾಯ ಸಂಘದ ಬಡ ಮಹಿಳೆಯ ಹಣ..?

ಗೋವಾದ ಕ್ಯಾಸಿನೋ ಪಾಲಾದ ಅಂಕೋಲಾದ ಸ್ತಿçà ಶಕ್ತಿ ಸ್ವಸಹಾಯ ಸಂಘದ ಬಡ ಮಹಿಳೆಯ ಹಣ..?

ಅಂಕೋಲಾಕ್ಕೆ ಸಿಐಡಿ ಅಧಿಕಾರಿಗಳ ತಂಡ

ರಾಘು ಕಾಕರಮಠ.

ಅಂಕೋಲಾ : ಇಲ್ಲಿನ ಕೆನರಾ (ಸಿಂಡಿಕೇಟ್) ಬ್ಯಾಂಕಿನಲ್ಲಿ ಮ್ಯಾನೇಜರ್ ಆಗಿದ್ದ ವೆಂಕಟೇಷ ಮಜ್ಜಿಗುಡ್ಡಾ ಅವರಿಂದ ನಡೆದ ಕೋಟ್ಯಾಂತರ ರೂಪಾಯಿ ಅವ್ಯವಹಾರಕ್ಕೆ ಸಂಬಂದಿಸಿದ0ತೆ ವಿಶೇಷ ತನಿಖೆ ನಡೆಸಲು ಸಿಐಡಿ ಅಧಿಕಾರಿಗಳ ತಂಡ ಮುಂದಾಗಿದೆ.

ಸೋಮವಾರದಿಂದ ತನಿಖೆ ಕೈಗೊಳ್ಳಲು ಮುಂದಾದ ಸಿಐಡಿ ತಂಡ ಬ್ಯಾಂಕಗೆ ಪ್ರಥಮವಾಗಿ ಭೇಟಿ ನೀಡಿ ಅಲ್ಲಿನ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳಲಿದೆ. ದೂರು ನೀಡಿರುವ ಪ್ರಸ್ತುತ ಕೆನರಾ (ಸಿಂಡಿಕೇಟ್ ಬ್ಯಾಂಕಿನ) ಮ್ಯಾನೇಜರ್ ಪ್ರತೀಕ್ಷಾ ಕಾರೆ ಅವರಿಂದ ಸಮಗ್ರ ವಿವರಣೆ ಪಡೆದು ವಿಚಾರಣೆಗೆ ಮುಂದಾಗಲಿದೆ.

ಸಿಐಡಿಯ ಡಿವೈಎಸ್ಪಿ, ಸೇರಿದಂತೆ 8 ಸಿಬ್ಬಂದಿಗಳ ತಂಡ ತನಿಖಾ ಕಾರ್ಯ ಕೈಗೊಳ್ಳಲಿದೆ ಎಂದು ಆಪ್ತ ಸುದ್ದಿ ಮೂಲಗಳಿಂದ ತಿಳಿದುಬಂದಿದೆ. ಈ ಅಪರಾತಪರಾ ಪ್ರಕರಣದಲ್ಲಿ ಕೇವಲ ಮ್ಯಾನೇಜರ್ ಅಷ್ಟೇ ಪಾಲ್ಗೊಳ್ಳದೆ, ಇನ್ನು ಮೂವರು ಕಿರಿಯ ಸಿಬ್ಬಂದಿಗಳು ಸಹ ಭಾಗಿಯಾಗಿದ್ದಾರೆ ಎಂದು ಆರೋಪವು ವ್ಯಕ್ತವಾಗಿದೆ. ಈ ಹಿನ್ನಲೆಯಲ್ಲಿ ಅವರನ್ನು ಸಹ ಸಿಐಡಿ ತಂಡ ವಿಚಾರಣೆಗೆ ಒಳಪಡಿಸುತ್ತದೆ ಎಂಬ ಮಾಹಿತಿ ಗೊತ್ತಾಗಿದೆ.

ಬ್ಯಾಂಕಿನಲ್ಲಿ ಅಪರಾತಪರಾ ಮಾಡಿದ ಹಣವನ್ನು ತನ್ನ ಮಾವ, ಪತ್ನಿಯ ಹಾಗೂ ಇನ್ನಿತರ ಖಾತೆಗೆ ವರ್ಗಾವಣೆಯಾಗಿರುವದು ಮೇಲ್ನೋಟಕ್ಕೆ ಕಂಡು ಬಂದಿದೆ.

ಗೋವಾದ ಕ್ಯಾಸಿನೋಕ್ಕೆ ಅಂಕೋಲಾದ ಸ್ತ್ರೀ ಶಕ್ತಿ ಸ್ವಸಹಾಯ ಸಂಘದ ಬಡ ಮಹಿಳೆಯ ಹಣ..?

ಕೆನರಾ (ಸಿಂಡಿಕೇಟ್) ಬ್ಯಾಂಕಿನಲ್ಲಿ ಮ್ಯಾನೇಜರ್ ಆಗಿದ್ದ ವೆಂಕಟೇಷ ಮಜ್ಜಿಗುಡ್ಡಾ ಅವರು ಸುಮಾರು 4 ಕೋಟಿಗೂ ಹೆಚ್ಚು ಹಣ ಗೋವಾದ ಕ್ಯಾಸಿನೋಕ್ಕೆ ಸುರಿದಿದ್ದಾರೆ ಎಂದು ಗೊತ್ತಾಗಿದೆ. ಇದರಲ್ಲಿ ಬ್ಯಾಂಕಿಗೆ ಸಂಬAದಿಸಿದAತೆ 1 ಕೋಟಿ 94 ಲಕ್ಷ ಹಣ ದುರಪಯೋಗಗೊಂಡಿದೆ ಎಂದು ಪೊಲೀಸ್ ದೂರು ದಾಖಲಾಗಿದೆ.

ಹಾಗೆ ವೆಂಕಟೇಷ ಮಜ್ಜಿಗುಡ್ಡಾ ಅವರು ಕಾಕರಮಠದಲ್ಲಿರುವ ಸ್ನೇಹಿತನ ಜೊತೆ ನಿರಂತರ ಪೋನ್ ಸಂಪರ್ಕ ಇರುವದು ಗೊತ್ತಾಗಿದೆ. ಈ ಹಿನ್ನಲೆಯಲ್ಲಿ ಅವರನ್ನು ಸಹ ವಿಚಾರಣೆ ನಡೆಸಲು ಸಿಐಡಿ ತಂಡ ರೂಪುರೇಷೆ ಸಿದ್ಧಪಡಿಸಿಕೊಂಡಿದೆ ಎಂದು ಗೊತ್ತಾಗಿದೆ. ಹಾಗೆ ವಂಚನೆಗೊಳಗಾದ 50 ಸ್ವಸಹಾಯ ಸಂಘದ ಮಹಿಳೆಯರಿಂದಲೂ ಹೇಳಿಕೆ ಪಡೆದುಕೊಳ್ಳಲಿದೆ.

ಪ್ರಕರಣವೇನು..?

ಸ್ತಿçà ಶಕ್ತಿ ಸ್ವಸಹಾಯ ಸಂಘಗಳಿಗೆ ಸಾಲ ನೀಡಿ, ಅದನ್ನು ಸಂಘದವರು ಮರು ಪಾವತಿ ಮಾಡಿದರೂ ಸಹ, ದಾಖಲೆಗಳಲ್ಲಿ ನಮೂದಿಸದೇ ಬ್ಯಾಂಕಿನ ಹಿರಿಯ ವ್ಯವಸ್ಥಾಪಕರಾಗಿದ್ದ ವೆಂಕಟೇಷ ಮಜ್ಜಿಗಡ್ಡಾ ನಮಗೆ ಮೋಸ ಮಾಡಿದ್ದಾರೆ ಎಂದು ಸಂಘದ ಮಹಿಳೆಯರು ಇವರ ವಿರುದ್ದ ಗಂಭೀರ ಆರೋಪ ಮಾಡಿದ್ದರು. ಹಾಗೆ ಬ್ಯಾಂಕಿನ ಇತರೆ ಸಿಬ್ಬಂದಿಗಳ ಐಡಿ ಬಳಸಿ ಬ್ಯಾಂಕ ಹಾಗೂ ಗ್ರಾಹಕರಿಗೆ ವಂಚಿಸಿರುವ ಬಗ್ಗೆ ದೂರು ಕೇಳಿ ಬಂದಿತ್ತು.

ಮಣಿಪಾಲದ ಕೆನರಾ ಬ್ಯಾಂಕ್‌ನಿAದ ಆಗಮಿಸಿದ ತನಿಖಾ ತಂಡ ಇಲಾಖಾ ವಿಚಾರಣೆ ನಡೆಸಿತ್ತು. ಈ ವೇಳೆ ವೆಂಕಟೇಷ ಮಜ್ಜಿಗಡಾ ಅವರು ಬ್ಯಾಂಕನಲ್ಲಿ ಅಪರಾತಪರಾ ಮಾಡಿರುವದು ಸಾಬೀತಾದ ಹಿನ್ನಲೆಯಲ್ಲಿ ಅವರ ಮೇಲೆ ಬ್ಯಾಂಕ್ ಕಾಯ್ದೆಯಡಿ ದೋಷಾರೋಪಣ ಪಟ್ಟಿಯನ್ನ ಕೆನರಾ ಬ್ಯಾಂಕಿನ ರಾಜ್ಯ ಮುಖ್ಯ ಅಧಿಕಾರಿಗಳಿಗೆ ಸಲ್ಲಿಸಿದ್ದರು.

ವರದಿಯನ್ನು ಸಂಪೂರ್ಣ ಅವಲೋಕಿಸಿದ ಆರ್.ಬಿ.ಐ ಮುಖ್ಯ ಅಧಿಕಾರಿ ಅವರು ವೆಂಕಟೇಷ ಮಜ್ಜಿಗಡ್ಡಾ ಅವರನ್ನು ಸೇವೆಯಿಂದಲೆ ಮುಕ್ತಗೊಳಿಸಿ ಆದೇಶ ಹೊರಡಿಸಿದ್ದರು.

Share:

Rate:

Previousನೇಣಿಗೆ ಶರಣಾದ ಅಗಸೂರಿನ ಬಾಲಚಂದ್ರ ನಾಯಕ
Nextಅಂಕೋಲಾದ ವೈಧ್ಯೆ ವಿರುದ್ದದ ಪೋಕ್ಸೋ ಕೇಸ್ ರದ್ದು

Related Posts

ಬೇಲೆಕೇರಿ ಬಂದರಿನಲ್ಲಿ ಮಟ್ಕಾ ಆಡಿಸುತ್ತಿದ್ದವನ ಬಂಧನ

ಬೇಲೆಕೇರಿ ಬಂದರಿನಲ್ಲಿ ಮಟ್ಕಾ ಆಡಿಸುತ್ತಿದ್ದವನ ಬಂಧನ

January 31, 2024

ಪತ್ನಿ – ಮಗು ನಾಪತ್ತೆ – ಹುಡುಕಿ ಕೊಡುವಂತೆ ಪೊಲೀಸರ ಮೊರೆ ಹೋದ ಪತಿ

ಪತ್ನಿ – ಮಗು ನಾಪತ್ತೆ – ಹುಡುಕಿ ಕೊಡುವಂತೆ ಪೊಲೀಸರ ಮೊರೆ ಹೋದ ಪತಿ

November 27, 2023

ವೃದ್ದ ದಂಪತಿಗಳ ಭೀಕರ ಕೊಲೆಗೈದ ಸುಖೇಶ ನಾಯಕ ಗ್ಯಾಂಗ್‌ಗೆ ಗಲ್ಲೋ..? ಅಥವಾ ಜೀವಾವಧಿಯೋ..? ಜನವರಿ 9 ರಂದು ತಿರ್ಪು

ವೃದ್ದ ದಂಪತಿಗಳ ಭೀಕರ ಕೊಲೆಗೈದ ಸುಖೇಶ ನಾಯಕ ಗ್ಯಾಂಗ್‌ಗೆ ಗಲ್ಲೋ..? ಅಥವಾ ಜೀವಾವಧಿಯೋ..? ಜನವರಿ 9 ರಂದು ತಿರ್ಪು

January 3, 2024

ದಿನಕರ ವೇದಿಕೆಯಿಂದ ಅಕ್ಷರ ಬ್ರಹ್ಮ ದಿನಕರ ದೇಸಾಯಿ ಅವರ ಜನ್ಮಾಚರಣೆ

ದಿನಕರ ವೇದಿಕೆಯಿಂದ ಅಕ್ಷರ ಬ್ರಹ್ಮ ದಿನಕರ ದೇಸಾಯಿ ಅವರ ಜನ್ಮಾಚರಣೆ

September 11, 2023

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಕ್ಯಾಷಿಯರ್  ಮೇಲೆ  ಅತ್ಯಾಚಾರಕ್ಕೆ ಯತ್ನ ;
    ಕ್ಯಾಷಿಯರ್ ಮೇಲೆ  ಅತ್ಯಾಚಾರಕ್ಕೆ ಯತ್ನ ;
  • ಅಂಕೋಲಾದಿ0ದ ಕರ್ನಾಟಕದ ಗಡಿ ಗೋವಾದಕ್ಕೆ ಜೂಜಾಟದ ವಲಸೆ
    ಅಂಕೋಲಾದಿ0ದ ಕರ್ನಾಟಕದ ಗಡಿ ಗೋವಾದಕ್ಕೆ ಜೂಜಾಟದ ವಲಸೆ
  • ಬಾಳೆಗುಳಿ ಪ್ಲೆöÊಓವರ್ ಬಳಿ ಗಾಂಜಾ ಸೇವಿಸಿದ್ದ ವ್ಯಕ್ತಿಯ ಬಂಧನ
    ಬಾಳೆಗುಳಿ ಪ್ಲೆöÊಓವರ್ ಬಳಿ ಗಾಂಜಾ ಸೇವಿಸಿದ್ದ ವ್ಯಕ್ತಿಯ ಬಂಧನ
  • ಗೊಬ್ಬರದ ಗುಂಡಿಗೆ ಬಿದ್ದು ಎರಡು ವರ್ಷದ ಮಗು ಸಾವು
    ಗೊಬ್ಬರದ ಗುಂಡಿಗೆ ಬಿದ್ದು ಎರಡು ವರ್ಷದ ಮಗು ಸಾವು
  • ಅಂಕೋಲಾದ ಬೆಳಂಬಾರದಲ್ಲಿ ಅಂದರ ಬಾಹರ ಆಟದಲ್ಲಿ ತೊಡಗಿದ್ದ 7 ಯುವಕರ ಮೇಲೆ ಪ್ರಕರಣ
    ಅಂಕೋಲಾದ ಬೆಳಂಬಾರದಲ್ಲಿ ಅಂದರ ಬಾಹರ ಆಟದಲ್ಲಿ ತೊಡಗಿದ್ದ 7 ಯುವಕರ ಮೇಲೆ ಪ್ರಕರಣ

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy