TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಗ್ರಹರಕ್ಷಕ ಪ್ರವೀಣ ನಾಯ್ಕ ಹೃದಯಾಘಾತಕ್ಕೆ ಬಲಿ

Apr 15, 2024 | ವಿಶೇಷ |

ಗ್ರಹರಕ್ಷಕ ಪ್ರವೀಣ ನಾಯ್ಕ ಹೃದಯಾಘಾತಕ್ಕೆ ಬಲಿ

ಗ್ರಹರಕ್ಷಕ ಪ್ರವೀಣ ನಾಯ್ಕ ಹೃದಯಾಘಾತಕ್ಕೆ ಬಲಿ

ಅಂಕೋಲಾ : ಗ್ರಹರಕ್ಷಕನಾಗಿ ಸೇವೆ ಸಲ್ಲಿಸುತ್ತಿದ್ದ ಹೊನ್ನೆಕೇರಿಯ ಪ್ರವೀಣ ಗೋಪಾಲ ನಾಯ್ಕ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿರುವ ಘಟನೆ ಇಂದು ಸೋಮವಾರ ಬೆಳಗಿನ ಜಾವ ನಡೆದಿದೆ.

 ಗ್ರಹರಕ್ಷಕನಾಗಿ ಸೇವೆಯಲ್ಲಿಯಲ್ಲಿದ್ದ ಪ್ರವೀಣ ನಾಯ್ಕ ಭಾನುವಾರ ರಾತ್ರಿ ಪಟ್ಟಣದಲ್ಲಿ ರಾತ್ರಿ ಗಸ್ತು ಕರ್ತವ್ಯವನ್ನು ಪೊಲೀಸ್ ಸಿಬ್ಬಂದಿ ರೈಸ್ ಭಗವಾನ ಅವರೊಂದಿದೆ ಜಂಟಿಯಾಗಿ ಕೈಗೊಂಡು ಸೋಮವಾರ ಬೆಳಿಗ್ಗೆ 5 ಗಂಟೆಗೆ ಮನೆಗೆ ತೆರಳಿದ್ದಾನೆ.

ಮನೆಗೆ ಬಂದು ವಿಶ್ರಾಂತಿ ತೆಗೆದುಕೊಳ್ಳುತ್ತಿರುವಾಗ ಸೋಮವಾರ ಬೆಳಿಗ್ಗೆ 7 ರ ಸುಮಾರಿಗೆ ಹೃದಯಾಘಾತಕ್ಕೆ ಪ್ರವೀಣ ತುತ್ತಾಗಿದ್ದಾನೆ. ಕೂಡಲೆ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿತಾದರೂ. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ವೃತ್ತಿಯಲ್ಲಿ ಆಟೋ ಚಾಲಕನಾಗಿ, ಪ್ರವೃತ್ತಿಯಲ್ಲಿ ಗ್ರಹರಕ್ಷಕನಾಗಿ ಹಾಗೆ ರಂಗಭೂಮಿಯ ಪ್ರಖ್ಯಾತ ಕಲಾವಿದನಾಗಿ ಪ್ರವೀಣತೆಯನ್ನು ಹೊಂದಿರುವ ಪ್ರವೀಣ ನಾಯ್ಕ ಎಲ್ಲರೊಂದಿಗೂ ಚೆನ್ನಾಗಿದ್ದು ಆತ್ಮೀಯನಾಗಿದ್ದ.

ಕಳೆದ 17 ವರ್ಷದಿಂದ ಗ್ರಹರಕ್ಷಕದಳದಲ್ಲಿ ಪ್ರವೀಣ ನಾಯ್ಕ ತನ್ನ ಶಿಸ್ತುಬಧ್ಧ ಕರ್ತವ್ಯದೊಂದಿಗೆ ಗುರುತಿಸಿಕೊಂಡು ಉತ್ತಮ ಗ್ರಹರಕ್ಷಕ ಪ್ರಶಸ್ತಿಗೂ ಪಾತ್ರನಾಗಿದ್ದ. ಸಂಗ್ಯಾಬಾಳ್ಯಾ ಬಯಲಾಟದಲ್ಲಿ ಖ್ಯಾತ್ ಭಾಗವತನಾಗಿ ಕಲಾ ಸೇವೆಯಲ್ಲಿ ತೊಡಗಿದ್ದ ಪ್ರವೀಣ ನಾಯ್ಕ ಸಂಗ್ಯಾನ ಪಾತ್ರ ಜೀವ ತುಂಬಿ ಜನಪ್ರೀಯತೆಗೆ ಕಾರಣನಾಗಿದ್ದ.

ಮೃತ ಪ್ರವೀಣ ಪತ್ನಿ, ಒರ್ವ ಪುತ್ರ, ಒರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಬಿಟ್ಟು ಅಗಲಿದ್ದಾನೆ.

ಸಂತಾಪ :

ಉತ್ತಮ ಗ್ರಹರಕ್ಷಕನಾಗಿ ಗುರುತಿಸಿಕೊಮಡಿದ್ದ ಪ್ರವೀಣ ನಾಯ್ಕ ನಿಧನಕ್ಕೆ ಅಂಕೋಲಾ ಠಾಣೆಯ ಪೊಲೀಸ್ ನಿರೀಕ್ಷಕ ಶ್ರೀಕಾಂತ ತೋಟಗಿ, ಗ್ರಹರಕ್ಷಕದ ದಳದ ಜಿಲ್ಲಾ ಸಮಾದೇಷ್ಠಧಿಕಾರಿ ಡಾ. ಸಂಜು ಟಿ. ನಾಯ್ಕ, ಗ್ರಹರಕ್ಷಣ ದಳದ ತಾಲೂಕಾ ಘಟಕಾಧಿಕಾರಿ ಹಿರಿಯ ನ್ಯಾಯವಾದಿ ವಿನೋದ ಶಾನಭಾಗ, ಹಿರಿಯ ನ್ಯಾಯವಾದಿ ಸುಭಾಷ ನಾರ್ವೆಕರ ಸೇರಿದಂತೆ ಸಂತಾಪ ಸೂಚಿಸಿದ್ದಾರೆ.

Share:

Rate:

Previousನಿಲೇಕಲ್ಲು ತೆಗೆಯಲು ಹೋದಾಗ 12 ವರ್ಷದ ಬಾಲಕಿ ನೀರಿನಲ್ಲಿ ಮುಳುಗಿ ಸಾವು 
Nextಹಾವು ಕಚ್ಚಿ ಯುವಕ ಸಾವು

Related Posts

ಸಾಹಿತಿ ವಿಷ್ಣು ನಾಯ್ಕರನ್ನು ಸನ್ಮಾನಿಸಿ ಗೌರವಿಸಿದ ಡಾ. ದಿನಕರ ದೇಸಾಯಿ ಸ್ಮಾರಕ ಪ್ರತಿಷ್ಠಾನ

ಸಾಹಿತಿ ವಿಷ್ಣು ನಾಯ್ಕರನ್ನು ಸನ್ಮಾನಿಸಿ ಗೌರವಿಸಿದ ಡಾ. ದಿನಕರ ದೇಸಾಯಿ ಸ್ಮಾರಕ ಪ್ರತಿಷ್ಠಾನ

July 10, 2023

ಕಾಂಗ್ರೆಸ್ ಅಭ್ಯರ್ಥಿಯಾಗಿ ಉಮೇಶ ನಾಯ್ಕ ನಾಮಪತ್ರ ಸಲ್ಲಿಕೆ

ಕಾಂಗ್ರೆಸ್ ಅಭ್ಯರ್ಥಿಯಾಗಿ ಉಮೇಶ ನಾಯ್ಕ ನಾಮಪತ್ರ ಸಲ್ಲಿಕೆ

December 15, 2023

ಹೆಬ್ಬುಳದಲ್ಲಿ ಕಾಡು ಹಂದಿ ಬೇಟೆಯಾಡಿದವನ ಒರ್ವನ ಬಂಧನ : ಇನ್ನೊರ್ವ ಪರಾರಿ

ಹೆಬ್ಬುಳದಲ್ಲಿ ಕಾಡು ಹಂದಿ ಬೇಟೆಯಾಡಿದವನ ಒರ್ವನ ಬಂಧನ : ಇನ್ನೊರ್ವ ಪರಾರಿ

October 20, 2023

ಮಣಿಪುರದಲ್ಲಿ ಮಹಿಳೆಯರ ಮೇಲೆ ನಡೆದ ದೌರ್ಜನ್ಯವನ್ನು ಖಂಡಿಸಿ ಉಕ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯಿಂದ ಪ್ರತಿಭಟನೆ

ಮಣಿಪುರದಲ್ಲಿ ಮಹಿಳೆಯರ ಮೇಲೆ ನಡೆದ ದೌರ್ಜನ್ಯವನ್ನು ಖಂಡಿಸಿ ಉಕ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯಿಂದ ಪ್ರತಿಭಟನೆ

July 28, 2023

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
    ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
  • ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
    ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
  • ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
    ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
  • ಗುಂಡು ಹಾರಿಸಿಕೊಂಡು ವೈದ್ಯ ಆತ್ಮಹತ್ಯೆ
    ಗುಂಡು ಹಾರಿಸಿಕೊಂಡು ವೈದ್ಯ ಆತ್ಮಹತ್ಯೆ
  • ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ  ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ
    ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy