TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಹುಲಿದೇವರವಾಡಾದಲ್ಲಿ ರಾತ್ರಿಯಾದೊಡನೆ ಮನೆಯಿಂದ ಹೊರ ಬೀಳಲು ಹೆದರುತ್ತಿರುವ ಜನ

Jun 20, 2024 | ವಿಶೇಷ |

ಹುಲಿದೇವರವಾಡಾದಲ್ಲಿ ರಾತ್ರಿಯಾದೊಡನೆ ಮನೆಯಿಂದ ಹೊರ ಬೀಳಲು ಹೆದರುತ್ತಿರುವ ಜನ

ಹುಲಿದೇವರವಾಡಾದಲ್ಲಿ ರಾತ್ರಿಯಾದೊಡನೆ ಮನೆಯಿಂದ ಹೊರ ಬೀಳಲು ಹೆದರುತ್ತಿರುವ ಜನ

ಬಾನಾಮತಿಯ ಗೆಜ್ಜೆಯ ಶಬ್ಧಕ್ಕೆ 20 ದಿನದಿಂದ ನಿದ್ದೆ ಬಿಟ್ಟ ಜನತೆ

ರಾಘು ಕಾಕರಮಠ.

ಅಂಕೋಲಾ : ರಾತ್ರಿ 10- 30 ಗಂಟೆಯಾದರೆ ಸಾಕು ಮನೆಯಿಂದ ಹೊರ ಬೀಳಲು ಹೆದರುತ್ತಿರುವ ಜನ. ಊರಿನ ಮುಂದಿನ ಬಾವಿಯ ಸಮೀಪ ಕೇಳಿ ಬರುವ ಗಜ್ಜೆಯ ಝಲಝಲ ಸದ್ದು ಈ ಗ್ರಾಮಸ್ಥರ ನಿದ್ದೆಯನ್ನೆ ನುಂಗಿದೆ. ಇ0ತಹ ಒಂದು ಕುತೂಹಲಕಾರಿ ವಿದ್ಯಮಾನಕ್ಕೆ ಸಾಕ್ಷಿಯಾಗಿ ಬಾನಾಮತಿ ಕಾಟಕ್ಕೆ ಒಳಗಾಗಿರೋದು ಪಟ್ಟಣದ ಹುಲಿದೇವರವಾಡಾದ ಗಣಪತಿ ದೇವಸ್ಥಾನದ ಬಾಬಿಮನೆಯ ಪ್ರದೇಶ.

 ನಿದ್ದೆ ಬಿಟ್ಟ 13 ಮನೆಯವರು :

ಪಟ್ಟಣದಿಂದ ಕೇವಲ 2 ಕೀಮಿ ಅಂತರದಲ್ಲಿ ಹುಲಿದೇವರವಾಡಾ ಎಂಬ ಗ್ರಾಮವಿದೆ. ಇಲ್ಲಿ ಹೆಚ್ಚಾಗಿ ದಲಿತ ಹಾಗೂ ಅಲ್ಪಸಂಖ್ಯಾತ ಮುಸ್ಲಿಂ ಭಾಂಧವರು ವಾಸಿಸುತ್ತಾರೆ. ಇಲ್ಲಿಯ ಜನ ಸುಶಿಕ್ಷಿತರು. ಇಷ್ಟು ದಿನ ಊರಲ್ಲಿ ಯಾವುದೇ ತೊಂದರೆ ಇಲ್ಲದೆ ನೆಮ್ಮದಿಯಿಂದ ಜೀವನ ಕಟ್ಟಿಕೊಂಡಿದ್ದ, ಇಲ್ಲಿನ ಜನರು ಕಳೆದ 20 ದಿನಗಳಿಂದ ನಿದ್ದೆ ಬಿಟ್ಟಿದ್ದಾರೆ. ರಾತ್ರಿ 10-30 ರಿಂದ ರಾತ್ರಿ 12 ಗಂಟೆಯ ತನಕ ಇಲ್ಲಿನ ವ್ಯಕ್ತಿಯೊಬ್ಬರ ಮನೆಯ ಮುಂದಿನ ಬಾವಿಯ ಎದುರಿನ ಗೇಟ್ ಬಳಿ ಝಲ್‌ಝಲ್ ಸದ್ದು ಕೇಳಿ ಬರುತ್ತಿದೆ. ಈ ಸದ್ದು ಗ್ರಾಮದ ಎಲ್ಲರ ಜನರ ಕಿವಿಗೆ ಭೀಳುತ್ತಿರುವದು ವಿಶೇಷವೆನಿಸಿದೆ. ಹೀಗಾಗಿ ಇಲ್ಲಿನ ಜನರು ಭಯಭೀತರಾಗಿ ನಿದ್ದೆ ಬಿಟ್ಟು ಅತಂತ್ರರಾಗಿದ್ದಾರೆ.

 40 ವರ್ಷದ ನಂತರ ತೆರೆದ ಬಾವಿ :

ಹುಲಿದೇವರವಾಡದಲ್ಲಿ ಕಳೆದ 14 ವರ್ಷಗಳಿಂದ ಒಂದು ಕುಟುಂಬ ವಾಸ ಮಾಡಿಕೊಂಡು ಬಂದಿದೆ. ಇವರ ವಾಸಿಸುವ ಮನೆಯ ಬಲ ಬದಿಯಲ್ಲಿ ಬಾವಿಯು ಇತ್ತು. ಆದರೆ ಕಳೆದ 40 ವರ್ಷಗಳಿಂದ ಈ ಬಾವಿಯನ್ನು ಉಪಯೋಗಿಸುತ್ತಿರಲಿಲ್ಲ, ಕಳೆದ 25 ದಿನದ ಹಿಂದೆ ಈ ಬಾವಿಯನ್ನು ಸ್ವಚ್ಛ ಮಾಡಿ, ಹೋಮ ಹಾಕಿ ಉಪಯೋಗಿಸಲು ಪ್ರಾರಂಬಿಸಿದರ0ತೆ.

ಈ ಬಾವಿಯಲ್ಲಿ ಪ್ರೇತಾತ್ಮ ಇದೆ ಎಂದು ಇಲ್ಲಿನ ಜನರು ಅನೇಕ ವರ್ಷಗಳಿಂದ ನಂಬಿಕೊAಡಿದ್ದರು. ಕಾಕತಾಳೀಯವೆಂಬAತೆ ಈ ಬಾವಿಯ ಉಪಯೋಗಿಸಲು ಪ್ರಾರಂಬಿಸಿದ್ದ ದಿನದಿಂದಲೆ, ಬಾವಿಯ ಸಮೀಪದಿಂದ ಗೆಜ್ಜೆಯ ಸದ್ದು ಕೇಳಿ ಬರುತ್ತಿದೆ ಎಂದು ಗ್ರಾಮಸ್ಥರೇ ಅಭಿಪ್ರಾಯ ಪಡುತ್ತಾರೆ. ಈ ಪ್ರೇತಕ್ಕೆ ಈ ಮನೆಯವರು ಸರಿಯಾಗಿ ದಿಗ್ಭಂಧನ ಹಾಕಿಲ್ಲ. ಹಾಗಾಗಿ ಅದು ಊರಿನ ಜನತೆಗೆ ತೊಂದರೆ ಕೊಡುತ್ತಿದೆ ಎನ್ನುವದು ಗ್ರಾಮಸ್ಥರ ಆರೋಪ. ಹೀಗಾಗಿ ಸುಮಾರು 40 ಕ್ಕೂ ಹೆಚ್ಚು ಇಲ್ಲಿನ ಜನರು ಈ ಮನೆಯ ಬಳಿ ಬಂದು ಆಕ್ರೋಶ ವ್ಯಕ್ತಪಡಿಸಿದ ಘಟನೆಯು ನಡೆದಿದೆ. ಆದರೆ ಈ ಮನೆಯವರು ಮಾತ್ರ ಈ ಪ್ರೇತದ ಗೆಜ್ಜೆ ಸದ್ದು ನಮಗೇನು ಕೇಳಿ ಬರುತ್ತಿಲ್ಲ. ನಾವು ಹೋಮ ಹಾಕಿಸಿಕೊಂಡು ನೀರನ್ನು ಉಪಯೋಗಿಸುತ್ತಿದ್ದೇವೆ. ನಿಮಗೆ ಬೇಕಾದರೆ ಸರಿಪಡಿಕೊಳ್ಳಿ ಎಂದು ಸಮರ್ಥಿಸಿಕೊಳ್ಳುತ್ತಿದ್ದಾರೆ.

 ಖ್ಯಾತ್ ಜ್ಯೋತಿಷಿಯ ಮೊರೆ ;

ಇಲ್ಲಿನ ಮುಸ್ಲಿಂ ಭಾಂದವರು ಈ ಸಮಸ್ಯೆಯ ಕುರಿತು ಖ್ಯಾತ್ ಜ್ಯೋತಿಷಿ ಮೋರೆ ಹೋಗಿದ್ದರು. ಕವಡೆ ಹಾಕಿದ ಜ್ಯೋತಿಷಿ ಇಲ್ಲಿ ದೊಡ್ಡ ಸಮಸ್ಯೆ ಇದೆ. ಎರಡು ಜೀವ ಹೋದರು ಹೋಗಬಹುದು. ಇಲ್ಲಿ ಬಾನಾಮತಿ ಕಾಟ ಇದೆ. ಆದಷ್ಟು ಬೇಗ ಇದನ್ನು ಸರಿ ಪಡಿಸಿಕೊಳ್ಳುವದು ಉತ್ತಮ ಎಂದು ಅಬಿಪ್ರಾಯ ವ್ಯಕ್ತಪಡಿಸಿ ಇದರ ಪರಿಹಾರಕ್ಕೆ 40 ಸಾವಿರ ಹಣ ಖರ್ಚು ಆಗಬಹುದು ಎಂದು ಹೇಳಿದ್ದರಂತೆ. ಏನಾದರೂ ಸರಿ ಊರಿನವರೆಲ್ಲರು ಸೇರಿ 40 ಸಾವಿರ ರೂ ಹೊಂದಿಸಲು ಹೋದರೆ, ಒಬ್ಬರು ಕೊಟ್ಟರೆ, ಇನ್ನೊಬ್ಬರು ತನ್ನ ಬಳಿ ಹಣ ಇಲ್ಲಾ ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದರಿಂದ ಜ್ಯೋತಿಷಿಯ 40 ಸಾವಿರದ ಪರಿಹಾರದ ಕಥೆ ಅರ್ಧಕ್ಕೆ ನಿಲ್ಲುವಂತಾಗಿದೆ.

 ರಾತ್ರಿ ಕಳೆಯಲು ಬೇರೆಡೆ ಸಾಗುತ್ತಿರುವ ಜನ :

ರಾತ್ರಿ 10-30 ಆಯಿಯೆಂದರೆ ಸಾಕು ಇಲ್ಲಿನ ಜನತೆಯ ಎದೆಯ ಬಡಿತ ಹೆಚ್ಚಾಗುತ್ತದೆ. ಇದರ ಉಸಾಬರಿಯೆ ಬೇಡ ಎಂದು ಕೆಲವರು ತಮ್ಮ ನೆಂಟರಿಷ್ಟರೋ, ಪರಿಚರಿಯಸ್ಥರ ಮನೆಗೆ ತೆರಳಿ ರಾತ್ರಿ ಕಳೆಯುವ ಪರಿಸ್ಥಿತಿ ಇಲ್ಲಿ ನಿರ್ಮಾಣವಾಗಿದೆ. ಅಷ್ಟೇ ಅಲ್ಲ ಗಜ್ಜೆ ಶಭ್ದದ ಭಯದಿಂದ ಇಬ್ಬರು ತೀವ್ರ ಜ್ವರದಿಂದಲೂ ಬಳಲುತ್ತಿದ್ದಾರೆ ಎಂದು ಗ್ರಾಮಸ್ಥರೆ ತಿಳಿಸುತ್ತಾರೆ.

ಗುರುವಾರ ಇಲ್ಲಿನ ಜನತೆ ಈ ಘಟನೆಗೆ ಅಸಹನೆ ವ್ಯಕ್ತಪಡಿಸಿ ಸಭೆ ನಡೆಸಿದ ಘಟನೆಯು ನಡೆದಿದೆ. ಈ ಸಂದರ್ಭದಲ್ಲಿ ಕಮರುದ್ದೀನ ಶೇಖ, ಪುರಸಭೆಯ ಸದಸ್ಯ ಸಬ್ಬೀರ ಶೇಖ, ವಿನಾಯಕ ಹೆಗಡೆಕರ, ನಯನಾ ಕಡವಾಡಕರ, ರಾಹುಲ ಕಡವಾಡಕರ, ಶಾಂತಿ ಆಗೇರ, ಮಮತಾಜ್ ಶೇಖ, ರಿಯಾನಾ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

ಅಸಹಾಯಕರಾದ ಪೊಲೀಸರು :

ಇಲ್ಲಿ ಗೆಜ್ಜೆ ಸದ್ದು ಕೇಳಿ ಬರುತ್ತಿದೆ. ದಯವಿಟ್ಟು ಬೇಗ ಬನ್ನಿ ಎಂದು 112 ನ ಮೂಲಕ ಪೊಲೀಸ್ ಸಹಾಯವಾಣಿಗೆ ಇಲ್ಲಿನ ಜನರು ಕರೆ ಮಾಡಿದ್ದರಂತೆ. ಕೂಡಲೆ ಸ್ಥಳಕ್ಕಾಗಮಿಸಿದ ಪೊಲೀಸ್ ಸಿಬ್ಬಂದಿಗಳಿಗೆ ಈ ಬಾನಾಮತಿ ಕಾಟದ ಬಗ್ಗೆ ಗ್ರಾಮಸ್ಥರು ವಿವರಿಸಿದ್ದಾರೆ. ಆದರೆ ನೀವೆನಾದ್ರೂ ಮನುಷ್ಯರಿಂದ ತೊಂದರೆ ಆದಲ್ಲಿ ಹೇಳಿ, ಈ ಬಾನಾಮತಿಯನ್ನು ನಾವು ಎಲ್ಲಿಂದ ಹಿಡಿದುಕೊಂಡು ಹೋಗೋದು ಎಂದು ಅಸಹಾಯಕರಾಗಿ ಮುಗುಳನಗುತ್ತಲೆ ಜೀಪ್‌ನ್ನೇರಿ ಹೊರಟು ಹೋಗಿದ್ದಾರೆ.

ಅಂತೂ ಬಾನಾಮತಿಯ ಕಾಟಕ್ಕೆ ಇಲ್ಲಿನ ಹುಲಿದೇವರವಾಡಾದ ಜನ ಅತಂತ್ರರಾಗಿದ್ದು, ಯಾವಾಗ ಇಲ್ಲಿನ ಬಾನಾಮತಿಯ ಬಾನಗಡಿ ಹೊರ ಬೀಳುತ್ತದೆಯೋ ಕಾದು ನೋಡಾಬೇಕಾಗಿದೆ.

ಒಂದೆರೆಡು ಜನಕ್ಕೆ ಗೆಜ್ಜೆ ಶಬ್ದ ಕೇಳಿ ಬಂದಲ್ಲಿ ಅದನ್ನು ಮೂಡ ನಂಬಿಕೆ ಅಂತಾ ಹೇಳ ಬಹುದಿತ್ತು. ಆದರೆ ಈ ಗೆಜ್ಜೆಯ ಶಬ್ದವನ್ನು 100 ಕ್ಕೂ ಹೆಚ್ಚು ಜನ ಕಳೆದ 20 ದಿನಗಳಿಂದ ಕೇಳುತ್ತಿದ್ದಾರೆ. ನಾವೆಲ್ಲ ರಾತ್ರಿ 10-30 ಗಂಟೆಯ ಒಳಗೆ ಮನೆ ಸೇರಿ ಕೊಳ್ಳುತ್ತಿದ್ದೇವೆ. ಈ ಬಾನಾಮತಿಯ ಕಾಟಕ್ಕೆ ಮುಕ್ತಿ ಯಾವಾಗ ಎಂದು ನಾವು ಚಿಂತಿತರಾಗಿದ್ದೇವೆ.

 ಸಬ್ಬೀರ್ ಶೇಖ.

ಸದಸ್ಯರು ಪುರಸಭೆ ಅಂಕೋಲಾ.

Share:

Rate:

Previousನರೇಂದ್ರ ಮೋದಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಬೆನ್ನಲ್ಲೆ ಅರಳಿದ ಬ್ರಹ್ಮ ಕಮಲ
Nextಮಗುವಾಗಿ ಜನ್ಮ ತಳೆದ ಶ್ರೀ ಶಾಂತಾದುರ್ಗೆಗೆ ತೊಟ್ಟಿಲು ತೂಗಿದ ಗುನಗರು

Related Posts

 ಜಮಗೋಡ ಬಳಿ ಕಾರ ಪಲ್ಟಿ : ದಂಪತಿಗಳು ಸಾವು

 ಜಮಗೋಡ ಬಳಿ ಕಾರ ಪಲ್ಟಿ : ದಂಪತಿಗಳು ಸಾವು

January 12, 2025

ಆಸ್ಪತ್ರೆಗಾಗಮಿಸಿ ಸಿಸಿಟಿವಿ ಪುಟೇಜ್  ಪರಿಶೀಲಿಸಿದ  ಡಿಎಚ್‌ಓ  ನೀರಜ್

ಆಸ್ಪತ್ರೆಗಾಗಮಿಸಿ ಸಿಸಿಟಿವಿ ಪುಟೇಜ್  ಪರಿಶೀಲಿಸಿದ  ಡಿಎಚ್‌ಓ  ನೀರಜ್

July 30, 2023

ಪದ್ಮಶ್ರೀ ಸುಕ್ರಿ ಗೌಡ ಅವರನ್ನು ಸನ್ಮಾನಿಸಿ ಗೌರವಿಸಿದ  ವಜ್ರಕೋಶದ ಕಮಾಂಡಿಂಗ್ ಆಫೀಸರ್ ಆರ್.ಕೆ. ಸಿಂಗ್

ಪದ್ಮಶ್ರೀ ಸುಕ್ರಿ ಗೌಡ ಅವರನ್ನು ಸನ್ಮಾನಿಸಿ ಗೌರವಿಸಿದ  ವಜ್ರಕೋಶದ ಕಮಾಂಡಿಂಗ್ ಆಫೀಸರ್ ಆರ್.ಕೆ. ಸಿಂಗ್

July 17, 2023

ತುರ್ತು ಪರಿಸ್ಥಿತಿಯಲ್ಲಿದ್ದ ಗರ್ಭಿಣಿಗೆ ಯಶಸ್ವಿ ಹೆರಿಗೆ; ವೈದ್ಯಕೀಯ ತಂಡಕ್ಕೆ ಸನ್ಮಾನ

ತುರ್ತು ಪರಿಸ್ಥಿತಿಯಲ್ಲಿದ್ದ ಗರ್ಭಿಣಿಗೆ ಯಶಸ್ವಿ ಹೆರಿಗೆ; ವೈದ್ಯಕೀಯ ತಂಡಕ್ಕೆ ಸನ್ಮಾನ

June 10, 2022

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ  ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ
    ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ
  • ಕೊಡ್ಲಗದ್ದೆಯಲ್ಲಿ ಹೆಚ್ಚಿದ ಚಿರತೆ ಹಾವಳಿ: ಗ್ರಾಮಸ್ಥರಲ್ಲಿ ಭೀತಿ
    ಕೊಡ್ಲಗದ್ದೆಯಲ್ಲಿ ಹೆಚ್ಚಿದ ಚಿರತೆ ಹಾವಳಿ: ಗ್ರಾಮಸ್ಥರಲ್ಲಿ ಭೀತಿ
  • ಮಹಿಳೆ ಸ್ನಾನ ಮಾಡುವವದನ್ನು ಇಣಕಿ ನೋಡಲು ಹೋಗಿ ಸಿಕ್ಕಿಬಿದ್ದ ಮಾಜಿ ಮಟ್ಕಾ ಬುಕ್ಕಿ
    ಮಹಿಳೆ ಸ್ನಾನ ಮಾಡುವವದನ್ನು ಇಣಕಿ ನೋಡಲು ಹೋಗಿ ಸಿಕ್ಕಿಬಿದ್ದ ಮಾಜಿ ಮಟ್ಕಾ ಬುಕ್ಕಿ
  • ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
    ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
  • ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ
    ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy