TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಪ್ರದೀಪ ಮಾಣೇಶ್ವರ ನಾಯಕರದು ಯಾವುದೇ ತಪ್ಪಿಲ್ಲ : ದೇವಸ್ಥಾನದ ಅಧ್ಯಕ್ಷ ಪ್ರವೀಣ ನಾಯಕ ಸ್ಪಷ್ಠನೆ

Jan 12, 2024 | ವಿಶೇಷ |

ಪ್ರದೀಪ ಮಾಣೇಶ್ವರ ನಾಯಕರದು ಯಾವುದೇ ತಪ್ಪಿಲ್ಲ : ದೇವಸ್ಥಾನದ ಅಧ್ಯಕ್ಷ ಪ್ರವೀಣ ನಾಯಕ ಸ್ಪಷ್ಠನೆ

ಅಂಕೋಲಾ : ಅಯೋಧ್ಯಾ ರಾಮ ಮಂದಿರದ ಉದ್ಘಾಟನೆಯ ನಿಮಿತ್ತ ಮಂತ್ರಾಕ್ಷತೆ ಹಂಚಲು ಹೋದಾಗ ವ್ಯಕ್ತಿಯೊಬ್ಬ ಧಾಂದಲೆ ನಡೆಸಿದ್ದಾನೆ ಎಂದು ಪೊಲೀಸ್ ಪ್ರಕರಣ ದಾಖಲಾದ ಪ್ರಕರಣ ಮಹತ್ವದ ತಿರುವು ಪಡೆದುಕೊಂಡಿದೆ. ಇದರಲ್ಲಿ ಹಿಲ್ಲೂರು ಗ್ರಾಮದ ತಿಂಗಳಬೈಲ್ನ ಮೂಲಿಗದ್ದೆಯ ಪ್ರದೀಪ ಮಾಣೇಶ್ವರ ನಾಯಕ ಅವನ ಯಾವುದೇ ತಪ್ಪಿಲ್ಲ ಎಂದು ರಾಮಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷ ಪ್ರವೀಣ ನಾಯಕ ಸ್ಪಷ್ಠಪಡಿಸಿದ್ದಾರೆ.

ಈ ಬಗ್ಗೆ ಪ್ರವೀಣ ನಾಯಕ ಅವರು ಹೇಳಿಕೆ ನೀಡಿ ಕಳೆದ ಹಲವಾರು ದಿನಗಳಿಂದ ಸಂಘ ಪರಿವಾರದವರು ರಾಮಲಿಂಗೇಶ್ವರ ದೇವಸ್ಥಾನವನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದರು. 29-12-2023 ರಂದು ಸಭೆ ಕರೆದು ಸದ್ರಿ ದೇವಸ್ಥಾನವನ್ನು ಧಾರ್ಮಿಕ ಕಾರ್ಯಕ್ರಮಗಳನ್ನು ಹೊರತುಪಡಿಸಿ ಯಾವುದೇ ರಾಜಕೀಯ ಪಕ್ಷದ ಅಥವಾ ಸಂಘ ಸಂಸ್ಥೆಯ ಕಾರ್ಯ ಚಟುವಟಿಕೆಗಳಿಗೆ ಬಳಸಿಕೊಳ್ಳಬಾರದೆಂದು ಠರಾವು ಪಾಸು ಮಾಡಿದರೂ, ಅದನ್ನು ಗಾಳಿಗೆ ತೂರಿ ಪುನಃ ಮೀಟಿಂಗ್ ನಡೆಸಿದ್ದರು.

ಇದನ್ನು ಪ್ರತಿಭಟಿಸಿದ ಪ್ರದೀಪ ಮಾಣೇಶ್ವರ ನಾಯಕ ಮತ್ತು ಫಿರ್ಯಾದುದಾರರಿಗೆ ಮಾತಿಗೆ ಮಾತು ನಡೆದು ಈರ್ವರ ಮೇಲೆಯೂ ಹಲ್ಲೆಯಾಗಿದೆ.

ನಾವು ನಮ್ಮ ದೇವಸ್ಥಾನದಲ್ಲಿ ಧಾರ್ಮಿಕ ಕಾರ್ಯಕ್ರಮ ಹೊರತುಪಡಿಸಿ ಯಾವುದೇ ರಾಜಕೀಯ ಮತ್ತು ಸಂಘ–ಸAಸ್ಥೆಗಳಿಗೆ ಕಾರ್ಯಕ್ರಮ ನಡೆಸಲು ಅವಕಾಶ ನೀಡಬಾರದೆಂದು ತೀರ್ಮಾನಿಸಿ ಠರಾವು ಪಾಸು ಮಾಡಿದ್ದೇವೆ. ಆದರೆ ಪುನಃ ರಾಜಕೀಯದ ಕಾರ್ಯಕ್ರಮವನ್ನು ನಡೆಸಲು ಸಭೆ ಸೇರಿದ್ದಾರೆಂದು ಮಾಹಿತಿ ಬಂದಿತ್ತು. ದೇಗುಲದ ಅಧ್ಯಕ್ಷನಾದರೂ ಇಲ್ಲಿ ಸಭೆ ಸೇರುವ ವಿಚಾರವನ್ನು ನನ್ನ ಗಮನಕ್ಕೆ ತಂದಿರಲಿಲ್ಲ. ಹೀಗಾಗಿ ರಾಜಕೀಯ ಪ್ರೇರಿತವಾಗಿ ಅಮಾಯಕ ಪ್ರದೀಪ ಮಾಣೇಶ್ವರ ನಾಯಕ ಅವರ ಮೇಲೆ ಪ್ರಕರಣ ದಾಖಲಾಗಿದೆ ಎಂದು ಪ್ರವೀಣ ನಾಯಕ ತಿಳಿಸಿದ್ದಾರೆ.

ಪ್ರಕರಣ ಏನಾಗಿತ್ತು..?

ಹಿಲ್ಲೂರಿನ ತಿಂಗಳಬೈಲನ ಶ್ರೀ ರಾಮಲಿಂಗೇಶ್ವರ ದೇವಸ್ಥಾನದ ಎದುg ಅಯೋಧ್ಯಾ ರಾಮ ಮಂದಿರದ ಉದ್ಘಾಟನೆಯ ನಿಮಿತ್ತ ಮಂತ್ರಾಕ್ಷತೆ ಹಂಚಲು ಹೋದಾಗ ವ್ಯಕ್ತಿಯೊಬ್ಬ ಧಾಂದಲೆ ನಡೆಸಿ ಎಂದು ಅವಾಚ್ಯ ಶಬ್ದದಿಂದ ಬೈದು, ಹಲ್ಲೆ ನಡೆಸಿದ್ದಾನೆ ಎಂದು ದತ್ತಾತ್ರೇಯ ಗಣಪತಿ ಹೆಗಡೆ ದೂರು ನೀಡಿದ್ದರು. ಈ ಬಗ್ಗೆ ಅಂಕೊಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಲೂಕಿನ ಹಿಲ್ಲೂರು ಗ್ರಾಮದ ತಿಂಗಳಬೈಲ್ನ ಮೂಲಿಗದ್ದೆಯ ಪ್ರದೀಪ ಮಾಣೇಶ್ವರ ನಾಯಕ ಆರೋಪಿತನಾಗಿದ್ದ.

ಶ್ರೀ ರಾಮಲಿಂಗೇಶ್ವರ ದೇವಸ್ಥಾನದ ಕಮಿಟಿ ಸದಸ್ಯ ಸಚಿತ ಗೋವಿಂದ್ರಾಯ ನಾಯಕ. ಹಿಲ್ಲೂರು ಹಾಗೂ ನಾಗರಾಜ ಗಣಪತಿ ಹೆಗಡೆ ಹಾಗೂ ದತ್ತಾತ್ರೇಯ ಗಣಪತಿ ಹೆಗಡೆ ಹಲ್ಲೆಗೊಳಗಾದವರಾಗಿದ್ದಾರೆ ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

Share:

Rate:

Previousಎಸೈ ಮನೆಯಲ್ಲಿ ಚಿನ್ನ ಕದ್ದ ಇಬ್ಬರು ಚಾಲಾಕಿ ಯುವತಿಯರು ಪೊಲೀಸ್ ವಶಕ್ಕೆ
Nextನಾಟಕ ರಚನೆಯ ನಿಷ್ಣಾತ ಸುಜೀತ

Related Posts

ಮೈಮುಟ್ಟಿ ಮಜಾ ತೆಗೆದುಕೊಳ್ಳಲು ಯತ್ನಿಸಿದ ಗುಜರಿ ಸಾಮಾನು ತೆಗೆದುಕೊಳ್ಳುವ ವ್ಯಕ್ತಿಗೆ ಧರ್ಮದೇಟು

ಮೈಮುಟ್ಟಿ ಮಜಾ ತೆಗೆದುಕೊಳ್ಳಲು ಯತ್ನಿಸಿದ ಗುಜರಿ ಸಾಮಾನು ತೆಗೆದುಕೊಳ್ಳುವ ವ್ಯಕ್ತಿಗೆ ಧರ್ಮದೇಟು

December 14, 2024

ಸರಕಾರಿ ಗೌರವದೊಂದಿಗೆ ಡಿವೈಎಸ್ಪಿ ಅರುಣ ನಾಯಕ ಅವರಿಗೆ ಅಂತಿಮ ವಿದಾಯ

ಸರಕಾರಿ ಗೌರವದೊಂದಿಗೆ ಡಿವೈಎಸ್ಪಿ ಅರುಣ ನಾಯಕ ಅವರಿಗೆ ಅಂತಿಮ ವಿದಾಯ

July 20, 2023

ಮಣಿಪುರದಲ್ಲಿ ಮಹಿಳೆಯರ ಮೇಲೆ ನಡೆದ ದೌರ್ಜನ್ಯವನ್ನು ಖಂಡಿಸಿ ಉಕ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯಿಂದ ಪ್ರತಿಭಟನೆ

ಮಣಿಪುರದಲ್ಲಿ ಮಹಿಳೆಯರ ಮೇಲೆ ನಡೆದ ದೌರ್ಜನ್ಯವನ್ನು ಖಂಡಿಸಿ ಉಕ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯಿಂದ ಪ್ರತಿಭಟನೆ

July 28, 2023

ವೈದ್ಯ ಹೆಗ್ಗಾರದಲ್ಲಿ ಅಕ್ಟೋಬರ್ 26 ರಿಂದ ಕನ್ನಡ ರಾಜ್ಯೋತ್ಸವ ಲೆಜೆಂಡ್ಸ್  ಟ್ರೋಪಿ 2023-24*

ವೈದ್ಯ ಹೆಗ್ಗಾರದಲ್ಲಿ ಅಕ್ಟೋಬರ್ 26 ರಿಂದ ಕನ್ನಡ ರಾಜ್ಯೋತ್ಸವ ಲೆಜೆಂಡ್ಸ್ ಟ್ರೋಪಿ 2023-24*

October 14, 2023

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಕ್ಯಾಷಿಯರ್  ಮೇಲೆ  ಅತ್ಯಾಚಾರಕ್ಕೆ ಯತ್ನ ;
    ಕ್ಯಾಷಿಯರ್ ಮೇಲೆ  ಅತ್ಯಾಚಾರಕ್ಕೆ ಯತ್ನ ;
  • ಅಂಕೋಲಾದಿ0ದ ಕರ್ನಾಟಕದ ಗಡಿ ಗೋವಾದಕ್ಕೆ ಜೂಜಾಟದ ವಲಸೆ
    ಅಂಕೋಲಾದಿ0ದ ಕರ್ನಾಟಕದ ಗಡಿ ಗೋವಾದಕ್ಕೆ ಜೂಜಾಟದ ವಲಸೆ
  • ಬಾಳೆಗುಳಿ ಪ್ಲೆöÊಓವರ್ ಬಳಿ ಗಾಂಜಾ ಸೇವಿಸಿದ್ದ ವ್ಯಕ್ತಿಯ ಬಂಧನ
    ಬಾಳೆಗುಳಿ ಪ್ಲೆöÊಓವರ್ ಬಳಿ ಗಾಂಜಾ ಸೇವಿಸಿದ್ದ ವ್ಯಕ್ತಿಯ ಬಂಧನ
  • ಗೊಬ್ಬರದ ಗುಂಡಿಗೆ ಬಿದ್ದು ಎರಡು ವರ್ಷದ ಮಗು ಸಾವು
    ಗೊಬ್ಬರದ ಗುಂಡಿಗೆ ಬಿದ್ದು ಎರಡು ವರ್ಷದ ಮಗು ಸಾವು
  • ಅಂಕೋಲಾದ ಬೆಳಂಬಾರದಲ್ಲಿ ಅಂದರ ಬಾಹರ ಆಟದಲ್ಲಿ ತೊಡಗಿದ್ದ 7 ಯುವಕರ ಮೇಲೆ ಪ್ರಕರಣ
    ಅಂಕೋಲಾದ ಬೆಳಂಬಾರದಲ್ಲಿ ಅಂದರ ಬಾಹರ ಆಟದಲ್ಲಿ ತೊಡಗಿದ್ದ 7 ಯುವಕರ ಮೇಲೆ ಪ್ರಕರಣ

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy