TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ನಿಲೇಕಲ್ಲು ತೆಗೆಯಲು ಹೋದಾಗ 12 ವರ್ಷದ ಬಾಲಕಿ ನೀರಿನಲ್ಲಿ ಮುಳುಗಿ ಸಾವು 

Apr 11, 2024 | ಅಪರಾಧ, ವಿಶೇಷ |

ನಿಲೇಕಲ್ಲು ತೆಗೆಯಲು ಹೋದಾಗ 12 ವರ್ಷದ ಬಾಲಕಿ ನೀರಿನಲ್ಲಿ ಮುಳುಗಿ ಸಾವು 

ನಿಲೇಕಲ್ಲು ತೆಗೆಯಲು ಹೋದಾಗ 12 ವರ್ಷದ ಬಾಲಕಿ ನೀರಿನಲ್ಲಿ ಮುಳುಗಿ ಸಾವು

ಅಂಕೋಲಾ : ಗೆಳೆಯರೊಂದಿಗೆ ನಿಲೆಕಲ್ಲು ತೆಗೆಯಲು ಹೋದಾಗ ಆಯ ತಪ್ಪಿ, ನೀರಿನಲ್ಲಿ ಮುಳುಗಿ 12 ವರ್ಷದ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ನಧಿಭಾಗದ ಅಳಿವೆ ಬಾಯಿಯ ಮುಡ್ರಾಣಿಯಲ್ಲಿ ಗುರುವಾರ ಸಂಜೆ ನಡೆದಿದೆ.

ಬೆಳಂಬಾರದ ಮುಡ್ರಾಣಿಯ ಐಶ್ವರ್ಯ ವಿಠ್ಠಲ ಗೌಡ (12) ಮೃತಪಟ್ಟ ಬಾಲಕಿಯಾಗಿದ್ದಾಳೆ.

ಘಟನೆಯ ವಿವರ :

ಐಶ್ವರ್ಯ ಗೌಡ ತನ್ನ ಇಬ್ಬರು ಸ್ನೇಹಿತೆಯರೊಂದಿಗೆ ಸಮುದ್ರ ಸಂಗಮ ಪ್ರದೇಶವಾದ ಮುಡ್ರಾಣಿ ಅಳಿವೆಯಲ್ಲಿ ನಿಲೆಕಲ್ಲು ತೆಗೆಯಲು ತೆರಳಿದ್ದರು.

ಈ ವೇಳೆ ನೀರಿನ ಸುಳಿಗೆ ಸಿಲುಕಿ ಮೂವರು ಬಾಲಕಿಯರು ನದಿಯಲ್ಲಿ ಬಿದ್ದಿದ್ದಾರೆ.ಇದನ್ನು ಗಮನಿಸಿದ ಶೇಡಿಕುಳಿಯ ಗ್ರಾಮಸ್ಥರು ಇಬ್ಬರು ಬಾಲಕಿಯರನ್ನು ರಕ್ಷಿಸಿದ್ದಾರೆ.  ಆದರೆ ವಿಧಿಯಾಟಕ್ಕೆ ಐಶ್ವರ್ಯ ಮಾತ್ರ ಬಾರದ ಲೋಕಕ್ಕೆ ತೆರಳಿದ್ದಾಳೆ. 

ಮುಡ್ರಾಣಿಯ ಹಿ.ಪ್ರಾ.ಶಾಲೆಯಲ್ಲಿ 6 ನೇ ತರಗತಿಯ ವಿದ್ಯಾರ್ಥಿಯಾಗಿದ್ದ ಐಶ್ವರ್ಯ  ತೀವ್ರ ಬಡತನದ ಕುಟುಂಬದಿಂದ ಬಂದ ಬಾಲಕಿಯಾಗಿದ್ದಾಳೆ.  ಕಳೆದ ವರ್ಷ ತಂದೆ ವಿಠ್ಠಲ ಗೌಡ ಅಕಾಲಿಕವಾಗಿ ಮೃತಪಟ್ಟಿದ್ದರು.  ಇನ್ನು ಸರಿಯಾಗಿ ಕಿವಿ ಕೇಳದ ತಾಯಿ ತನ್ನ ಮೂವರು ಮಕ್ಕಳನ್ಬು ಕೂಲಿ ಮಾಡಿ ಸಾಕುತ್ತಿದ್ದಳು ಎಂದು ತಿಳಿದು ಬಂದಿದೆ.

ಪಿಎಎಸೈ ಜಯಶ್ರೀ ಪ್ರಭಾಕರ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಂಡಿದ್ದಾರೆ.

Share:

Rate:

Previousಅಂಕೋಲಾ ತಾಲೂಕಿಗೆ ಮಾನ್ಯಾ ನಾಯ್ಕ ಪ್ರಥಮ
Nextಗ್ರಹರಕ್ಷಕ ಪ್ರವೀಣ ನಾಯ್ಕ ಹೃದಯಾಘಾತಕ್ಕೆ ಬಲಿ

Related Posts

ಅಂಕೋಲಾದಲ್ಲಿ  ಮುಂದುವರೆದ ವರುಣಾರ್ಭಟ : ಅಪಾಯ ಮಟ್ಟದಲ್ಲಿ ಉಕ್ಕಿ ಹರಿಯುತ್ತಿರುವ ಗಂಗಾವಳಿ

ಅಂಕೋಲಾದಲ್ಲಿ ಮುಂದುವರೆದ ವರುಣಾರ್ಭಟ : ಅಪಾಯ ಮಟ್ಟದಲ್ಲಿ ಉಕ್ಕಿ ಹರಿಯುತ್ತಿರುವ ಗಂಗಾವಳಿ

July 23, 2023

ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ

ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ

August 19, 2022

ಮಣಿಪುರ ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ-ಪೈಶಾಚಿಕ ನಗ್ನ ಮೆರವಣಿಗೆ ಕೃತ್ಯಕ್ಕೆ : ಶಾಂತಾರಾಮ ನಾಯಕ ಖಂಡನೆ

ಮಣಿಪುರ ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ-ಪೈಶಾಚಿಕ ನಗ್ನ ಮೆರವಣಿಗೆ ಕೃತ್ಯಕ್ಕೆ : ಶಾಂತಾರಾಮ ನಾಯಕ ಖಂಡನೆ

July 26, 2023

ಅಕ್ರಮವಾಗಿ ಜಾನುವಾರ ಸಾಗಾಟ: ಪೊಲೀಸರಿಂದ 2 ಹೋರಿಗಳ ರಕ್ಷಣೆ

ಅಕ್ರಮವಾಗಿ ಜಾನುವಾರ ಸಾಗಾಟ: ಪೊಲೀಸರಿಂದ 2 ಹೋರಿಗಳ ರಕ್ಷಣೆ

August 24, 2022

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
    ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
  • ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
    ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
  • ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
    ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
  • ಗುಂಡು ಹಾರಿಸಿಕೊಂಡು ವೈದ್ಯ ಆತ್ಮಹತ್ಯೆ
    ಗುಂಡು ಹಾರಿಸಿಕೊಂಡು ವೈದ್ಯ ಆತ್ಮಹತ್ಯೆ
  • ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ  ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ
    ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy