
ಹಿಲ್ಲೂರಿನಲ್ಲಿ ತಾಯಿ-ಮಗಳ ಡಬಲ್ ಮರ್ಡರ್..!
ಪತ್ನಿ–ಮಗಳನ್ನು ಯಾರೋ ಮರ್ಡರ್ ಮಾಡಿದ್ದಾರೆ ಎಂದು ಸುಳ್ಳು ಮಾಹಿತಿ ನೀಡಿ ಪೊಲೀಸರನ್ನು ಯಾಮಾರಿಸಿದ ಭೂಪ
ರಾಘು ಕಾಕರಮಠ@9449999775
ಅಂಕೋಲಾ : ತನ್ನ ಪತ್ನಿ ಹಾಗೂ ಮಗಳನ್ನು ಯಾರೋ ಮರ್ಡರ್ ಮಾಡಿದ್ದಾರೆ. ಕೂಡಲೆ ಸ್ಥಳಕ್ಕಾಗಮಿಸಿ ಕೊಲೆಗಡುಕರನ್ನು ಬಂಧಿಸುವ0ತೆ 112 (ಪೊಲೀಸ್ ಸಹಾಯವಾಣಿಗೆ) ಕರೆ ಮಾಡಿ ಗೋಗೆರೆದಿದ್ದ ವ್ಯಕ್ತಿಯೊಬ್ಬನ ಮಾತು ನಂಬಿ ಎರ್ರಾಬರ್ರೀಯಾಗಿ ಸ್ಥಳಕ್ಕೆ ಹೋದ ಪೊಲೀಸರು ಶವದ ಹುಡುಕಾಟ ನಡೆಸಿದ ಕುತೂಹಲಕಾರಿ ಅಪರೂಪದ ಘಟನೆ ಹಿಲ್ಲೂರಿನ ಬಿಲ್ಲನಬೈಲನಲ್ಲಿ ನಡೆದಿದೆ.
ಹೈ ಅಲರ್ಟ್ ಆದ ಖಾಕಿ ಪಡೆ :
ಶುಕ್ರವಾರ ಸಂಜೆ 5-30 ರ ಸುಮಾರಿಗೆ 112 ಗೆ ನಾನು ಹಿಲ್ಲೂರಿನ ಬಿಲ್ಲನಬೈಲನ ಮಂಜುನಾಥ ಬೊಮ್ಮಯ್ಯ ನಾಯಕ ಅಂತಾ. ಇಲ್ಲಿ ನನ್ನ ಪತ್ನಿ ಹಾಗೂ ಮಗಳನ್ನು ಯಾರೋ ಭೀಕರವಾಗಿ ಕೊಲೆ ಮಾಡಿ ತೆರಳಿದ್ದಾರೆ. ನನಗೇಕೋ ಹೆದರಿಕೆ ಆಗತಾ ಇದೆ. ಕೂಡಲೆ ಸ್ಥಳಕ್ಕೆ ಬರುವಂತೆ ವಿನಂತಿಸಿ ಪೋನ್ ಕರೆ ಬಂದಿತ್ತು.
ಕೂಡಲೆ ಕಾರವಾರದಿಂದ ವೈಯರಲೆಸ್ ಮೂಲಕ (ಹೈ ಅಲರ್ಟ್ ಕ್ರೆöÊಂ) ಹಿಲ್ಲೂರಿನಲ್ಲಿ ನಡೆದಿದೆ. ಕೂಡಲೆ ಸ್ಥಳಕ್ಕೆ ತೆರಳಿ ತನಿಖೆ ನಡೆಸುವಂತೆ ಆದೇಶ ಬಂದಿತ್ತು. ಕೂಡಲೆ ಕರೆ ಸ್ವೀಕರಿಸಿದ ಪಿಎಸೈ ಉದ್ಧಪ್ಪ ಧರೆಪ್ಪನವರ್, ಎಎಸೈ ಲಲಿತಾ ರಜಪೂತ್ ಹಾಗೂ ಸಿಬ್ಬಂದಿ ಪ್ರವೀಣ ಪೂಜಾರ ಮೇಲಾಧಿಕಾರಿಗಳಿಗೆ ವಿಷಯ ತಿಳಿಸಿ, ಜೀಪನ್ನೇರಿ ತಾಲೂಕು ಕೇಂದ್ರದಿAದ 37 ಕೀಮೀ ಅಂತರವಿರುವ ಹಿಲ್ಲೂರಿಗೆ ತೆರಳಿದ್ದರು.
ಮುಗುಳನಗುತ್ತಲೆ ನಿಂತಿದ್ದ ಭೂಫ್ :
ಕರೆ ಬಂದ 25 ನಿಮಿಷದಲ್ಲಿ ಪೊಲೀಸರು ಸ್ಥಳಕ್ಕೆ ತೆರಳಿ ಮಂಜುನಾಥ ಬೊಮ್ಮಯ್ಯ ನಾಯಕ ಅವರ ಮನೆಯ ಸುತ್ತಮುತ್ತ ಶವದ ಹುಡುಕಾಟ ನಡೆಸಿದ್ದರು. ಆದರೆ 15 ನಿಮಿಷ ಕಳೆದರೂ ಶವ ಪತ್ತೆ ಆಗದೆ ಹೋದಾಗ ಅಲ್ಲಿಯೇ ಮುಗುಳನಗುತ್ತಲೆ ಬಂದ ಕರೆ ಮಾಡಿದ್ದ ಮಂಜುನಾಥ ನಾಯಕ ನಿಮಗೆ ನನ್ನ ಪತ್ನಿ ಹಾಗೂ ಮಗಳ ಶವ ಸಿಕ್ಕಿತೆ ಎಂದು ಪೊಲೀಸರಲ್ಲಿ ಪ್ರಶ್ನಿಸಿದ್ದಾನೆ. ಅದು ಸಿಗಲ್ಲಾ ಬಿಡಿ ಅವರು ಮುಂದೆ ಕೊಲೆ ಆದರೂ ಆಗಬಹುದು. ನಾನೆ ಮುನ್ನೆಚ್ಚರಿಕೆಯಾಗಿ ಕರೆ ಮಾಡಿದ್ದೆ. ಅವರ ಮನೆಯಲ್ಲಿ ಕಾಣಾತಾ ಇಲ್ಲಾ. ಹಾಗಾಗಿ ಸುಳ್ಳು ಕರೆ ಮಾಡಿದ್ದೆ ಎಂದು ಪೊಲೀಸರ ಮುಂದೆ ಹಲ್ಲು ಕಿರಿದು ನಕ್ಕಿದ್ದಾನೆ. ಇತನ ಮಾತು ಕೇಳಿ ಪಿತ್ತ ನೆತ್ತಿಗೆ ಏರಿದ ಪೊಲೀಸರು ಇತನ ಕುಂಡೆಯ ಮೇಲೆ ನಾಲ್ಕು ಹಾಕಿ, ಲಾಠಿ ರುಚಿ ತೋರಿಸಿದ್ದಾರೆ.
ಮಾನಸಿಕ ಅಸ್ವಸ್ಥ :
ಹಿಲ್ಲೂರು ಗ್ರಾಮದಲ್ಲಿ ಕೊಲೆಯಾಗಿದೆ ಎಂದು ವಿಷಯ ತಿಳಿದ ಕೂಡಲೆ ನೂರಾರು ಜನರು ಸ್ಥಳದಲ್ಲಿ ಜಮಾಯಿಸಿದ್ದರು. ಆದರೆ ಇತನ ಮನೆಯವರು ಆತ ಮಾನಸಿಕ ಅಸ್ವಸ್ಥನಾಗಿ ಕಳೆದೊಂದು ವರ್ಷದಿಂದ ಹೀಗೆ ಮಾಡುತ್ತಿದ್ದಾನೆ. ಇತನ ಕಿರುಕುಳದಿಂದ ಬೇಸೆತ್ತು ಪತ್ನಿ– ಮಕ್ಕಳು ಬೇರೆಯವರ ಮನೆಯಲ್ಲಿ ವಾಸ ಮಾಡತಾ ಇದ್ದಾರೆ ಎಂದು ತಿಳಿಸಿದ್ದಾರೆ. ಇತನ ಮಾನಸಿಕ ಅಸ್ವಸ್ಥ ಎಂದು ತಿಳಿದ ಪೊಲೀಸರು ನಿಟ್ಟಿಸಿರು ಬಿಟ್ಟು ಮತ್ತೆ ಅಂಕೋಲಾ ಠಾಣೆಯತ್ತ ಮುಖ ಮಾಡಿದ್ದಾರೆ.
ತಲೆಬಿಸಿಗೆ ಒಳಗಾಗಿದ್ದ ಪೊಲೀಸರು..?
ಇದೆನಪ್ಪಾ ಡಬಲ್ ಮರ್ಡರ್ ಪ್ರಕರಣವಾಗಿದೆ ಎಂದು ಪೊಲೀಸರು ಪ್ರಾರಂಭದಲ್ಲಿ ತಲೆ ಬಿಸಿ ಮಾಡಿಕೊಂಡಿದ್ದರು ಎನ್ನಲಾಗಿದೆ. ಕಾರವಾರದಿಂದ ಶ್ವಾನದಳ, ಬೆರಳಚ್ಚು ತಜ್ಷರ ತಂಡ ಅಂಕೋಲಾಕ್ಕೆ ವಾಹನದಲ್ಲಿ ಆಗಮಿಸುತ್ತಿದ್ದರು ಎಂದು ತಿಳಿದು ಬಂದಿದೆ. ಆದರೆ ಇಂತಹ ಪ್ರಕರಣ ನಡೆದಿಲ್ಲ ಎಂದು ಮರು ಮಾಹಿತಿ ಅಂಕೋಲಾ ಪೊಲೀಸರಿಂದಲೆ ಬಂದ ಕೂಡಲೆ ಬಿಣಗಾದಿಂದ ಶ್ವಾನದಳ, ಬೆರಳಚ್ಚು ತಜ್ಷರ ತಂಡ ವಾಪಸ್ ತೆರಳಿದ್ದಾರೆ ಎಂದು ಗೊತ್ತಾಗಿದೆ.
ಅಂಕೋಲಾದ ಹಿಲ್ಲೂರಿನಲ್ಲಿ ಡಬಲ್ ಮರ್ಡರ್ ಆಗಿದೆ ಎಂದು ಮಾಹಿತಿ ಬಂದಿತ್ತು. ಈ ಬಗ್ಗೆ ಕೂಡಲೆ ಕಾರ್ಯಪ್ರವೃತ್ತರಾಗಿದ್ದೇವು. ಆದರೆ ಕರೆ ಮಾಡಿದ ವ್ಯಕ್ತಿ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದಾನೆ ಎಂದು ತನಿಖೆಯಿಂದ ತಿಳಿದುಬಂದಿದೆ. ಹೀಗಾಗಿ ಆತ ಸುಳ್ಳು ಮಾಹಿತಿಯನ್ನು 112 ಗೆ ನೀಡಿದ್ದ.
ಉದ್ದಪ್ಪ ಧರೆಪ್ಪನವರ್.
ಪಿಎಸೈ ಅಂಕೋಲಾ ಪೊಲೀಸ್ ಠಾಣೆ.