TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ನಿಮ್ಮ ನೋವುಗಳೊಂದಿಗೆ ನಾನಿದ್ದೇನೆ ಎಂದು ವಿಶೇಷ ಚೇತನರಿಗೆ ದೈರ್ಯ ತುಂಬಿದ ಶಾಸಕ ಸತೀಶ ಸೈಲ್

Oct 2, 2024 | ವಿಶೇಷ |

ನಿಮ್ಮ ನೋವುಗಳೊಂದಿಗೆ ನಾನಿದ್ದೇನೆ ಎಂದು ವಿಶೇಷ ಚೇತನರಿಗೆ ದೈರ್ಯ ತುಂಬಿದ ಶಾಸಕ ಸತೀಶ ಸೈಲ್

ನಿಮ್ಮ ನೋವುಗಳೊಂದಿಗೆ ನಾನಿದ್ದೇನೆ ಎಂದು ವಿಶೇಷ ಚೇತನರಿಗೆ ದೈರ್ಯ ತುಂಬಿದ ಶಾಸಕ ಸತೀಶ ಸೈಲ್

ವಿಶೇಷ ಚೇತನರನ್ನು ಗೌರವದಿಂದ ಕಾಣಬೇಕು : ಶಾಸಕ ಸತೀಶ ಸೈಲ್

ವರದಿ : ಗೋಪು ನಾಯಕ. ಅಡ್ಲೂರು.

ಕಾರವಾರ.: ವಿಶೇಷ ಚೇತನರನ್ನು ಗೌರವದಿಂದ ಕಾಣಬೇಕು. ಅವರಿಗೆ ಸರ್ಕಾರದಿಂದ ದೊರೆಯುವ ಸೌಲತ್ತುಗಳನ್ನು ಪ್ರಾಮಾಣಿಕವಾಗಿ ತಲುಪಿಸಬೇಕು. ಅಂತಹ ಉದ್ದೇಶದಿಂದಲೇ ನಮ್ಮ ಸರ್ಕಾರ ವಿಕಲಚೇತನರಿಗಾಗಿ ಹಲವು ಸವಲತ್ತುಗಳನ್ನು ಒದಗಿಸಿಕೊಡುವ ಕಾರ್ಯ ಮಾಡುತ್ತಿದೆ ಎಂದು ಕಾರವಾರ ಅಂಕೋಲಾ ಕ್ಷೇತ್ರದ ಶಾಸಕ ಸತೀಶ ಸೈಲ ಹೇಳಿದರು.

ತಾಲೂಕಿನ ಅಮದಳ್ಳಿ ಗ್ರಾಪಂ ವಿಶೇಷ ಗ್ರಾಮ ಸಭೆ ಹಾಗೂ ವಿಕಲಚೇತನರ ಗ್ರಾಮ ಸಭೆಯನ್ನು ಉದ್ಘಾಟಿಸಿ, ವಿಶೇಷ ಚೇತನರಿಗೆ ಗ್ರಾಪಂದ %5 ನಿಧಿಯಲ್ಲಿ ಆರು ತ್ರಿಚಕ್ರ ವಾಹನ 8 ಶ್ರವಣ ಸಾಧನ 13 ವೀಲ್ ಚೇರ್ ಮೂರು ಉರುಗೋಲು ನೀಡಿ ಮಾತನಾಡಿ ನಮ್ಮ ನಡುವೆ ನಮ್ಮ ಸಹೋದರ ಸಹೋದರಿಯರಂತೆ ಇರುವ ವಿಶೇಷ ಚೇತನರಿಗೆ ಪ್ರೀತಿ ತೋರಿಸಬೇಕು. ಅವರಿಗೆ ಸಮಸ್ಯೆ ಇರುವ ಸಂದರ್ಭದಲ್ಲಿ ಸಹಕರಿಸಬೇಕಾದದ್ದು ಪ್ರತಿಯೊಬ್ಬರ ಆದ್ಯ ಕರ್ತವ್ಯ. ನಾನು ಸಹ ನನ್ನ ಅನುದಾನದಲ್ಲಿ ನನ್ನ ಕ್ಷೇತ್ರದ ವಿಶೇಷ ಚೇತನರಿಗೆ ಹಿಂದಿನ ಅವಧಿಯಲ್ಲಿಯೂ ಹಲವಾರು ಸವಲತ್ತುಗಳನ್ನು ನೀಡಿದ್ದೇನೆ ಎನ್ನುವ ಆತ್ಮ ತೃಪ್ತಿ ನನ್ನಲ್ಲಿದೆ ಮುಂದೆಯೂ ನನ್ನ ಅಧಿಕಾರ ಅವಧಿಯಲ್ಲಿ ಮತ್ತು ವೈಯಕ್ತಿಕವಾಗಿ ವಿಶೇಷ ಚೇತನಿಗೆ ಸಹಕರಿಸಲು ನಾನು ಸದಾ ಸಿದ್ಧನಿದ್ದೇನೆ ಎಂದರು.

 ಹಮದಳ್ಳಿ ಗ್ರಾಪಂ ಅಧ್ಯಕ್ಷ ಪುರುಷೋತ್ತಮ್ ಗೌಡ ಮಾತನಾಡಿ ಶಾಸಕ ಸತೀಶ ಸೈಲ್ ಕರ್ತವ್ಯ ಮತ್ತು ಬದ್ಧತೆಗೆ ಶಿರೂರಿನ ಗುಡ್ಡ ಕುಸಿತದ ಸಂದರ್ಭದಲ್ಲಿ ಅವರು ತೋರಿಸಿದ ಕಳಕಳಿ ಸಾಕ್ಷಿಯಾಗಿದೆ. ಜನಪ್ರತಿನಿಧಿ ಅಂದಮೇಲೆ ಹೊಗಳಿಕೆ ತೆಗಳಿಕೆಗಳು ಸಾಮಾನ್ಯ. ನಮ್ಮ ಗ್ರಾಪಂ ವ್ಯಾಪ್ತಿಯಿಂದ ಹಿಡಿದು ಕಾರವಾರ ಅಂಕೋಲಾ ಕ್ಷೇತ್ರಕ್ಕೆ ತನಗೆ ಬಂದ ಅನುದಾನದಲ್ಲಿ 25 ಕೋಟಿ ರೂಪಾಯಿಗಳನ್ನು ದೇವಸ್ಥಾನಗಳ ಅಭಿವೃದ್ಧಿಗೆ ತೊಡಗಿಸಿ ವಿಶೇಷ ಕರ್ತವ್ಯ ಮೆರೆದಿದ್ದಾರೆ. ಅಭಿವೃದ್ಧಿಯಲ್ಲಿ ಎಲ್ಲರಿಗಿಂತ ಒಂದು ಹೆಜ್ಜೆ ಮುಂದಿದ್ದಾರೆ ನಮ್ಮ ಶಾಸಕರು ಎಂದರು. ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ರಾಘು ಭಟ್ಟ, ಪಾಪಂ ಕಾರ್ಯ ನಿರ್ವಹಣಾಧಿಕಾರಿ ವೀರಣ್ಣ ಗೌಡ

 ಗ್ರಾಪಂ ಸದಸ್ಯರು, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಮತ್ತು ಗ್ರಾಮಸ್ಥರು ವಿಶೇಷ ಚೇತನರು ಉಪಸ್ಥಿತರಿದ್ದರು

ನಮ್ಮ ಸಮಾಜದ ಓರ್ವ ಪ್ರಮುಖರಾದ ರಾಜು ತಾಂಡೆಲ್ ರವರನ್ನು ನಾವು ಅಗಲಿದ್ದೇವೆ. ಕೆಲವರು ತಮ್ಮ ಲಾಭಕ್ಕಾಗಿ ಶಾಸಕ ಸತೀಶ ಸೈಲ್ ರವರ ಹೆಸರನ್ನು ಈ ವಿಚಾರದಲ್ಲಿ ಕೆಡಿಸುವ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ರಾಜು ತಾಂಡೇಲ್ ಮತ್ತು ಶಾಸಕ ಸತೀಶ ಸೈಲ್ ರವರ ಬಾಂಧವ್ಯ ಅತ್ಯುತ್ತಮವಾಗಿತ್ತು. ಇಂತಹ ಉತ್ತಮ ಜನಪ್ರತಿನಿಧಿಗಳಿಗೆ ರಾಜು ತಾಂಡೇಲ್ ವಿಚಾರದಲ್ಲಿ ಕೆಟ್ಟ ಹೆಸರನ್ನು ತರುವ ಪ್ರಯತ್ನವನ್ನು ಮಾಡಿದರೂ ಯಾರು ನಂಬುವುದಿಲ್ಲ.

 ದೇವಾನಂದ ಚಂಡೇಕರ್

 ಸದಸ್ಯರು ಗ್ರಾಪಂ ಅಮದಳ್ಳಿ

Share:

Rate:

Previousಪ್ರಾಣಿ ವಧೆಯ ನಿಷೇಧ ದಿನದಂದು ಅಂಕೋಲಾದಲ್ಲಿ ಮಾಂಸ ಮಾರಾಟ :
Nextಅಂಕೋಲಾ ಬಸ್  ನಿಲ್ದಾಣದಲ್ಲಿ  ಯುವತಿ ನಾಪತ್ತೆ

Related Posts

ಅಂಕೋಲಾ ಸಿಟಿ ಲಯನ್ಸ್ ಕ್ಲಬ್ ನೂತನ ಅಧ್ಯಕ್ಷರಾಗಿ ಡಾ. ವಿಜಯದೀಪ್

ಅಂಕೋಲಾ ಸಿಟಿ ಲಯನ್ಸ್ ಕ್ಲಬ್ ನೂತನ ಅಧ್ಯಕ್ಷರಾಗಿ ಡಾ. ವಿಜಯದೀಪ್

July 10, 2023

ಯಡೋಗಾದಲ್ಲಿ ಶ್ರೀ ಶಿವಪ್ರತಿಷ್ಠಾನದಿಂದ ಭಂಡಾರ ಕಾರ್ಯಕ್ರಮ.

ಯಡೋಗಾದಲ್ಲಿ ಶ್ರೀ ಶಿವಪ್ರತಿಷ್ಠಾನದಿಂದ ಭಂಡಾರ ಕಾರ್ಯಕ್ರಮ.

June 19, 2022

ಇಲಾಖೆಯ ಗೌರವ ಹೆಚ್ಚಿಸಿದ ಸಿಬ್ಬಂದಿಗಳ ಕಾರ್ಯ ಶ್ಲಾಘನೀಯ : ಚೈತನ್ಯ

ಇಲಾಖೆಯ ಗೌರವ ಹೆಚ್ಚಿಸಿದ ಸಿಬ್ಬಂದಿಗಳ ಕಾರ್ಯ ಶ್ಲಾಘನೀಯ : ಚೈತನ್ಯ

August 1, 2023

ಅಂಕೋಲಾದಲ್ಲಿ ಕೋಮು ಸೌಹಾರ್ದತೆಗೆ ಸಾಕ್ಷಿಯಾದ ಮೊಹರಂ

ಅಂಕೋಲಾದಲ್ಲಿ ಕೋಮು ಸೌಹಾರ್ದತೆಗೆ ಸಾಕ್ಷಿಯಾದ ಮೊಹರಂ

July 29, 2023

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
    ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
  • ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ
    ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ
  • ಗುಪ್ತಚರ ಇಲಾಖೆಯ ಸಿಬ್ಬಂದಿಯಾಗಿ ಶೇಖರ ಸಿದ್ದಿ
    ಗುಪ್ತಚರ ಇಲಾಖೆಯ ಸಿಬ್ಬಂದಿಯಾಗಿ ಶೇಖರ ಸಿದ್ದಿ
  • ಕರ್ತವ್ಯ ಲೋಪದ ಹಿನ್ನಲೆ : ಪುನೀತ್ ನಾಯ್ಕ ಭಟ್ಕಳ ಗ್ರಾಮೀಣ ಠಾಣೆಗೆ ನಿಯೋಜನೆ
    ಕರ್ತವ್ಯ ಲೋಪದ ಹಿನ್ನಲೆ : ಪುನೀತ್ ನಾಯ್ಕ ಭಟ್ಕಳ ಗ್ರಾಮೀಣ ಠಾಣೆಗೆ ನಿಯೋಜನೆ
  • ಗೋಕರ್ಣದಲ್ಲಿ ಜೂಜಿಗೆ ಕಡಿವಾಣ ಹಾಕಿದ ಸಿಪಿಐ ಶ್ರೀಧರ್ ಎಸ್.ಆರ್.
    ಗೋಕರ್ಣದಲ್ಲಿ ಜೂಜಿಗೆ ಕಡಿವಾಣ ಹಾಕಿದ ಸಿಪಿಐ ಶ್ರೀಧರ್ ಎಸ್.ಆರ್.

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy