TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಕಬ್ಬಡ್ಡಿ ಆಡುತ್ತಲೆ ಹೃದಯಾಘಾತಕ್ಕೆ ಒಳಗಾಗಿ ಯುವಕ ಸಾವು 

Dec 15, 2024 | ಅಪರಾಧ |

ಕಬ್ಬಡ್ಡಿ ಆಡುತ್ತಲೆ ಹೃದಯಾಘಾತಕ್ಕೆ ಒಳಗಾಗಿ ಯುವಕ ಸಾವು 

ಕಬ್ಬಡ್ಡಿ ಆಡುತ್ತಲೆ ಹೃದಯಾಘಾತಕ್ಕೆ ಒಳಗಾಗಿ ಯುವಕ ಸಾವು 

ಅಂಕೋಲಾ : ಕಬ್ಬಡಿ ಆಟ ಆಡುತ್ತಿರುವಾಗಲೇ ರಕ್ತದೊತ್ತಡ ಕಡಿಮೆಯಾಗಿ ಮೃತಪಟ್ಟ ಘಟನೆ ಅವರ್ಸಾದಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ.

ಬಾಸ್ಗೋಡದ ಸುದರ್ಶನ ವಿನಾಯಕ ಆಗೇರ 22 ವರ್ಷ ಮೃತ ಪಟ್ಟ ಯುವಕನಾಗಿದ್ದಾನೆ.

ಏನಾಗಿತ್ತು…? 

ಅವರ್ಸಾದ ಶ್ರೀ ಕಾತ್ಯಾಯನಿ ಯುವಕ ಸಂಘದಿಂದ ಆಗೇರ ಸಮಾಜದ ಜಿಲ್ಲಾ ಮಟ್ಟದ ಕಬ್ಬಡ್ಡಿ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು. 

ಪಂದ್ಯಾವಳಿಯು ಶನಿವಾರ ರಾತ್ರಿ ಚಾಲನೆ ಪಡೆದುಕೊಂಡಿತ್ತು‌.  ಭಾನುವಾರ ಬೆಳಿಗ್ಗೆ ಸುಮಾರು 8 ಗಂಟೆಗೆ ಪಂದ್ಯಾವಳಿಯ ಸೆಮಿ ಪೈನಲ ಪಂದ್ಯ ನಡೆದಿತ್ತು. ಈ ಪಂದ್ಯದಲ್ಲಿ ಕೊಗ್ರೆಯ ಶ್ರೀ ಮಹಾಸತಿ ತಂಡದಿಂದ ಸುದರ್ಶನ್ ಆಟ ಆಡಿ ಸೆಮಿ ಪೈನಲ ಪಂದ್ಯ ವಿಜೇತರಾಗಿದ್ದರು.  

ಪಂದ್ಯ ಮುಗಿದ ತಕ್ಷಣ ದಣಿವಾರಿಸಿಕೊಳ್ಳಲು ಸುದರ್ಶನ ತನ್ನ ಗೆಳೆಯರೊಂದಿಗೆ ಮಾತನಾಡುತ್ತ ಕುಳಿತುಕೊಂಡಿದ್ದನು.  ಏಕಾಏಕಿ ಕುಳಿತಲ್ಲಿಯೆ ಸುದರ್ಶನ ಅಸ್ವಸ್ಥನಾಗಿ ನೆಲಕ್ಕೆ ತಲೆ ಮಾಡಿದ್ದ.  ಕೂಡಲೇ ಇತನನ್ನು ಅಂಕೋಲಾದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆ ತಂದಿದ್ದರು.  ಸುದರ್ಶನನನ್ನು ತಪಾಸಣೆ ನಡೆಸಿದ ವೈದ್ಯರಿಗೆ ಈತ ಮೊದಲೆ ಪಟ್ಟಿರುವನ್ನು ದೃಡಪಡಿಸಿದರು.

ಉತ್ತಮ ಕ್ರೀಡಾ ಪಟುವಾಗಿದ್ದ ಸುದರ್ಶನ್ ಅನೇಕ ಕಬ್ಬಡ್ಡಿ ಪಂದ್ಯಾವಳಿಯಲ್ಲಿ ಹತ್ತಾರು ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡ ಹಿರಿಮೆಯನ್ಬು ಕೂಡ ದಾಖಲಿಸಿದ್ದ.   ಬಾಸ್ಗೋಡದನಾದ ಸುದರ್ಶನ ತಂದೆ, ತಾಯಿ, ಒರ್ವ ಹಿರಿಯ ಸಹೋದರ ಸೇರಿದಂತೆ ಅಪಾರ ಬಂಧು ಬಳಗವನ್ನು ಬಿಟ್ಟು ಅಗಲಿದ್ದಾನೆ.

Share:

Rate:

Previousಮೈಮುಟ್ಟಿ ಮಜಾ ತೆಗೆದುಕೊಳ್ಳಲು ಯತ್ನಿಸಿದ ಗುಜರಿ ಸಾಮಾನು ತೆಗೆದುಕೊಳ್ಳುವ ವ್ಯಕ್ತಿಗೆ ಧರ್ಮದೇಟು
Nextಹೊಸಕಂಬಿ ಬಳಿ ಅಕ್ರಮವಾಗಿ ಡಿಸೈಲ ಇಳಿಸುವ ವಿಚಾರದಲ್ಲಿ ದಿನಕ್ಕೊಂದು ಗಲಾಟೆ

Related Posts

ಅಂಕೋಲಾದಲ್ಲಿ ನಡೆದ ಆತ್ಮಹತ್ಯೆ ಪ್ರಕರಣವೊಂದಕ್ಕೆ ಮರುಜೀವ :

ಅಂಕೋಲಾದಲ್ಲಿ ನಡೆದ ಆತ್ಮಹತ್ಯೆ ಪ್ರಕರಣವೊಂದಕ್ಕೆ ಮರುಜೀವ :

July 14, 2023

ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ ವಿಶಾಲಾಕ್ಷಿಗೆ ಅಪಘಾತ

ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ ವಿಶಾಲಾಕ್ಷಿಗೆ ಅಪಘಾತ

June 30, 2023

ನಾಲಾಯಕ್ ಎಲಿಸ್ ಏಕಲಪಾಟಿಯನ್ನು ಗಡಿಪಾರು ಮಾಡುವಂತೆ ಭಜರಂಗ ದಳದಿಂದ ಪ್ರತಿಭಟನೆ

ನಾಲಾಯಕ್ ಎಲಿಸ್ ಏಕಲಪಾಟಿಯನ್ನು ಗಡಿಪಾರು ಮಾಡುವಂತೆ ಭಜರಂಗ ದಳದಿಂದ ಪ್ರತಿಭಟನೆ

September 1, 2023

ಜಿಂಕೆ ಕೊಂಬು ಮಾರಾಟ ಮಾಡಲು ಯತ್ನಿಸಿದವರ ಬಂಧನ : ನಾಲ್ವರು ಆರೋಪಿಗಳು ಅರೆಸ್ಟ್.

ಜಿಂಕೆ ಕೊಂಬು ಮಾರಾಟ ಮಾಡಲು ಯತ್ನಿಸಿದವರ ಬಂಧನ : ನಾಲ್ವರು ಆರೋಪಿಗಳು ಅರೆಸ್ಟ್.

July 10, 2022

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ  ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ
    ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ
  • ಕೊಡ್ಲಗದ್ದೆಯಲ್ಲಿ ಹೆಚ್ಚಿದ ಚಿರತೆ ಹಾವಳಿ: ಗ್ರಾಮಸ್ಥರಲ್ಲಿ ಭೀತಿ
    ಕೊಡ್ಲಗದ್ದೆಯಲ್ಲಿ ಹೆಚ್ಚಿದ ಚಿರತೆ ಹಾವಳಿ: ಗ್ರಾಮಸ್ಥರಲ್ಲಿ ಭೀತಿ
  • ಮಹಿಳೆ ಸ್ನಾನ ಮಾಡುವವದನ್ನು ಇಣಕಿ ನೋಡಲು ಹೋಗಿ ಸಿಕ್ಕಿಬಿದ್ದ ಮಾಜಿ ಮಟ್ಕಾ ಬುಕ್ಕಿ
    ಮಹಿಳೆ ಸ್ನಾನ ಮಾಡುವವದನ್ನು ಇಣಕಿ ನೋಡಲು ಹೋಗಿ ಸಿಕ್ಕಿಬಿದ್ದ ಮಾಜಿ ಮಟ್ಕಾ ಬುಕ್ಕಿ
  • ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
    ಅಂಕೋಲಾದಲ್ಲಿ ಮಕ್ಕಳ ದತ್ತು ಹೆಸರಿನಲ್ಲಿ ಭಾರಿ ಮೋಸ – ಐವರು ವಿರುದ್ಧ ಪ್ರಕರಣ
  • ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ
    ಗೋಕರ್ಣದಲ್ಲಿ ಮಟ್ಕಾ ಚೀಟಿ ಬರೆಯುತ್ತಿವನ ಮೇಲೆ ಪ್ರಕರಣ

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy